ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಪತ್ರಕ್ಕೂ ಸಹಿ ಹಾಕಿಲ್ಲ, ಬಿಜೆಪಿ ಪರ ಇದ್ದೇನೆ: ಕರುಣಾಕರ ರೆಡ್ಡಿ

ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿಕೆ
Last Updated 10 ಜೂನ್ 2021, 1:51 IST
ಅಕ್ಷರ ಗಾತ್ರ

ಹರಪನಹಳ್ಳಿ:‘ಯಾವ ಪತ್ರಕ್ಕೂ ಸಹಿ ಮಾಡಿಲ್ಲ, ನಾನು ಯಾರ ಪರವಾಗಿಯೂ ಇಲ್ಲ. ಬಿಜೆಪಿ ಪರವಾಗಿದ್ದೇನೆ’ ಎಂದು ಶಾಸಕಜಿ. ಕರುಣಾಕರ ರೆಡ್ಡಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘160 ಜನ ಶಾಸಕರು ಸಹಿ ಮಾಡಿದ್ದಾರೆ ಎನ್ನುವ ಹೇಳಿಕೆ ನನಗೆ ಗೊತ್ತಿಲ್ಲ. ಬಿಜೆಪಿ ಹಿಂದೆ ಇಬ್ಭಾಗವಾದಾಗಲೂ ಆ ಪಕ್ಷದಲ್ಲಿಯೇ ಇದ್ದೆ. ಈಗಲೂ ಮತ್ತು ಮುಂದೆಯೂ ಬಿಜೆಪಿಯಲ್ಲಿರುತ್ತೇನೆ.ಬಿ.ಎಸ್.ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ. ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆಯೇ ಇಲ್ಲವೋ ಎಂಬ ಬಗ್ಗೆ ಹೇಳಲು ನಾನು ಜೋತಿಷಿ ಅಲ್ಲ’ ಎಂದು ಹೇಳಿದರು.

‘ನನಗೂ ಕೋವಿಡ್ ಪಾಸಿಟಿವ್ ಆಗಿ ಬಳ್ಳಾರಿ ಮನೆಯಲ್ಲಿದ್ದೆ. ಬೆಂಗಳೂರಿಗೆ ಹೋಗಲು ಆಗಿಲ್ಲ. ಸಿಎಂ ಸ್ಥಾನ ಬದಲಾವಣೆಗಿಂತ ನನ್ನ ಕ್ಷೇತ್ರದ ಜನರ ಆರೋಗ್ಯ ಮುಖ್ಯ. ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಂಡಿದ್ದೇನೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ್, ರಾಘವೇಂದ್ರ ಶೆಟ್ಟಿ, ಯು.ಪಿ. ನಾಗರಾಜ್, ಸಂತೋಷ್, ನಿಟ್ಟೂರು ಸಣ್ಣಹಾಲಪ್ಪ, ಆರ್. ಲೋಕೇಶ್, ಶೇಖರಪ್ಪ, ಬಾಗಳಿ ಕೊಟ್ರೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT