<p><strong>ಹರಪನಹಳ್ಳಿ:‘</strong>ಯಾವ ಪತ್ರಕ್ಕೂ ಸಹಿ ಮಾಡಿಲ್ಲ, ನಾನು ಯಾರ ಪರವಾಗಿಯೂ ಇಲ್ಲ. ಬಿಜೆಪಿ ಪರವಾಗಿದ್ದೇನೆ’ ಎಂದು ಶಾಸಕಜಿ. ಕರುಣಾಕರ ರೆಡ್ಡಿ ಹೇಳಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘160 ಜನ ಶಾಸಕರು ಸಹಿ ಮಾಡಿದ್ದಾರೆ ಎನ್ನುವ ಹೇಳಿಕೆ ನನಗೆ ಗೊತ್ತಿಲ್ಲ. ಬಿಜೆಪಿ ಹಿಂದೆ ಇಬ್ಭಾಗವಾದಾಗಲೂ ಆ ಪಕ್ಷದಲ್ಲಿಯೇ ಇದ್ದೆ. ಈಗಲೂ ಮತ್ತು ಮುಂದೆಯೂ ಬಿಜೆಪಿಯಲ್ಲಿರುತ್ತೇನೆ.ಬಿ.ಎಸ್.ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ. ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆಯೇ ಇಲ್ಲವೋ ಎಂಬ ಬಗ್ಗೆ ಹೇಳಲು ನಾನು ಜೋತಿಷಿ ಅಲ್ಲ’ ಎಂದು ಹೇಳಿದರು.</p>.<p>‘ನನಗೂ ಕೋವಿಡ್ ಪಾಸಿಟಿವ್ ಆಗಿ ಬಳ್ಳಾರಿ ಮನೆಯಲ್ಲಿದ್ದೆ. ಬೆಂಗಳೂರಿಗೆ ಹೋಗಲು ಆಗಿಲ್ಲ. ಸಿಎಂ ಸ್ಥಾನ ಬದಲಾವಣೆಗಿಂತ ನನ್ನ ಕ್ಷೇತ್ರದ ಜನರ ಆರೋಗ್ಯ ಮುಖ್ಯ. ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಂಡಿದ್ದೇನೆ’ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ್, ರಾಘವೇಂದ್ರ ಶೆಟ್ಟಿ, ಯು.ಪಿ. ನಾಗರಾಜ್, ಸಂತೋಷ್, ನಿಟ್ಟೂರು ಸಣ್ಣಹಾಲಪ್ಪ, ಆರ್. ಲೋಕೇಶ್, ಶೇಖರಪ್ಪ, ಬಾಗಳಿ ಕೊಟ್ರೇಶಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:‘</strong>ಯಾವ ಪತ್ರಕ್ಕೂ ಸಹಿ ಮಾಡಿಲ್ಲ, ನಾನು ಯಾರ ಪರವಾಗಿಯೂ ಇಲ್ಲ. ಬಿಜೆಪಿ ಪರವಾಗಿದ್ದೇನೆ’ ಎಂದು ಶಾಸಕಜಿ. ಕರುಣಾಕರ ರೆಡ್ಡಿ ಹೇಳಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘160 ಜನ ಶಾಸಕರು ಸಹಿ ಮಾಡಿದ್ದಾರೆ ಎನ್ನುವ ಹೇಳಿಕೆ ನನಗೆ ಗೊತ್ತಿಲ್ಲ. ಬಿಜೆಪಿ ಹಿಂದೆ ಇಬ್ಭಾಗವಾದಾಗಲೂ ಆ ಪಕ್ಷದಲ್ಲಿಯೇ ಇದ್ದೆ. ಈಗಲೂ ಮತ್ತು ಮುಂದೆಯೂ ಬಿಜೆಪಿಯಲ್ಲಿರುತ್ತೇನೆ.ಬಿ.ಎಸ್.ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ. ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆಯೇ ಇಲ್ಲವೋ ಎಂಬ ಬಗ್ಗೆ ಹೇಳಲು ನಾನು ಜೋತಿಷಿ ಅಲ್ಲ’ ಎಂದು ಹೇಳಿದರು.</p>.<p>‘ನನಗೂ ಕೋವಿಡ್ ಪಾಸಿಟಿವ್ ಆಗಿ ಬಳ್ಳಾರಿ ಮನೆಯಲ್ಲಿದ್ದೆ. ಬೆಂಗಳೂರಿಗೆ ಹೋಗಲು ಆಗಿಲ್ಲ. ಸಿಎಂ ಸ್ಥಾನ ಬದಲಾವಣೆಗಿಂತ ನನ್ನ ಕ್ಷೇತ್ರದ ಜನರ ಆರೋಗ್ಯ ಮುಖ್ಯ. ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಂಡಿದ್ದೇನೆ’ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ್, ರಾಘವೇಂದ್ರ ಶೆಟ್ಟಿ, ಯು.ಪಿ. ನಾಗರಾಜ್, ಸಂತೋಷ್, ನಿಟ್ಟೂರು ಸಣ್ಣಹಾಲಪ್ಪ, ಆರ್. ಲೋಕೇಶ್, ಶೇಖರಪ್ಪ, ಬಾಗಳಿ ಕೊಟ್ರೇಶಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>