‘ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ಉತ್ತಮವಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರು, ಶಾಸಕರು, ಬೂತ್ ಮಟ್ಟದ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದ ಚುನಾವಣೆ ಮಾಡಿದಂತೆ ಆಗಿದೆ ಎಂದು ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ದಾವಣಗೆರೆ ಇತಿಹಾಸದಲ್ಲೇ ಕಾರ್ಯಕರ್ತರು ಈ ರೀತಿ ಕೆಲಸ ಮಾಡಿದ್ದು ಕಡಿಮೆ. ಗ್ಯಾರಂಟಿ ಯೋಜನೆಗಳು, ಶಾಸಕರ ಬಲ ನಮಗೆ ಇದೆ. 20 ವರ್ಷಗಳಿಂದ ಕಾಂಗ್ರೆಸ್ನ ಲೋಕಸಭಾ ಸದಸ್ಯರನ್ನು ನೋಡಿಲ್ಲ. ಈ ಬಾರಿ ನೋಡೇ ನೋಡುತ್ತೇವೆ ಎಂದು ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದು ಅವರು ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.