<p><strong>ದಾವಣಗೆರೆ</strong>: ಕೆರೆ ಒತ್ತುವರಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ತೆರವುಗೊಳಿಸಿದ ಮಾಹಿತಿಯನ್ನು ದಾಖಲೆ ಸಮೇತ ಜಿಲ್ಲಾಡಳಿತಕ್ಕೆ ಸಲ್ಲಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಲ-ಜಲ ಹಾಗೂ ಪರಿಸರ ಸಂರಕ್ಷಣೆ ಕುರಿತು ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೆರೆ ಸಂರಕ್ಷಣೆಗೆ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿ ಗಮನ ಹರಿಸಬೇಕು. ಕೆರೆ ಒತ್ತುವರಿ ಹಾಗೂ ತೆರವುಗೊಳಿಸಿರುವುದನ್ನು ದಾಖಲೆ ಸಮೇತ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>‘ಮಳೆ ನೀರು ಸಂಗ್ರಹ ಕಾರ್ಯ ತಮಿಳುನಾಡಿನಲ್ಲಿ ಅದ್ಭುತವಾಗಿ ನಡೆದಿದೆ. ಕೊಳವೆಬಾವಿ ಮರುಪೂಣಕ್ಕೆ ಅನುದಾನ ಲಭ್ಯವಿದೆ. ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗುತ್ತಿದೆ. ಇಂತಹ ಕೊಳವೆಬಾವಿಗಳ ಮರುಪೂರಣಕ್ಕೆ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಅಂಗನವಾಡಿ, ವಿದ್ಯಾರ್ಥಿನಿಲಯ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಮಳೆನೀರು ಸಂಗ್ರಹದ ವ್ಯವಸ್ಥೆ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು. ಪರಿಸರ ಸಂರಕ್ಷಣೆಯ ಕ್ರಾಂತಿ ಒಂದೇ ದಿನದಲ್ಲಿ ಸಾಧ್ಯವಿಲ್ಲ. ಇದು ಹಂತಹಂತವಾಗಿ ಜನಾಂದೋಲನವಾಗಿ ರೂಪುಗೊಳ್ಳಬೇಕು’ ಎಂದು ಹೇಳಿದರು.</p>.<p>‘ಬೂದು ನೀರು, ಕಪ್ಪು ನೀರು ನಿರ್ವಹಣೆ, ಸ್ವಚ್ಛತೆಗೆ ಸರ್ಕಾರದಲ್ಲಿ ಅನುದಾನದ ಲಭ್ಯತೆ ಇದೆ. ಇದಕ್ಕೆ ₹ 4,000 ಕೋಟಿಯನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಇದರಲ್ಲಿ ಒಂದಷ್ಟು ಭಾಗವನ್ನು ಜಿಲ್ಲೆಗೂ ತರಲು ಅವಕಾಶವಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿಗಳಾದ ಸಂತೋಷ್ ಪಾಟೀಲ್, ಅಭಿಷೇಕ್, ನಾಗರಿಕ ಹಿತರಕ್ಷಣಾ ಸಮಿತಿಯ ಈಶ್ವರಪ್ಪ, ರೈತ ಮುಖಂಡ ಸಿದ್ಧನೂರು ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೆರೆ ಒತ್ತುವರಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ತೆರವುಗೊಳಿಸಿದ ಮಾಹಿತಿಯನ್ನು ದಾಖಲೆ ಸಮೇತ ಜಿಲ್ಲಾಡಳಿತಕ್ಕೆ ಸಲ್ಲಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಲ-ಜಲ ಹಾಗೂ ಪರಿಸರ ಸಂರಕ್ಷಣೆ ಕುರಿತು ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೆರೆ ಸಂರಕ್ಷಣೆಗೆ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿ ಗಮನ ಹರಿಸಬೇಕು. ಕೆರೆ ಒತ್ತುವರಿ ಹಾಗೂ ತೆರವುಗೊಳಿಸಿರುವುದನ್ನು ದಾಖಲೆ ಸಮೇತ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>‘ಮಳೆ ನೀರು ಸಂಗ್ರಹ ಕಾರ್ಯ ತಮಿಳುನಾಡಿನಲ್ಲಿ ಅದ್ಭುತವಾಗಿ ನಡೆದಿದೆ. ಕೊಳವೆಬಾವಿ ಮರುಪೂಣಕ್ಕೆ ಅನುದಾನ ಲಭ್ಯವಿದೆ. ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗುತ್ತಿದೆ. ಇಂತಹ ಕೊಳವೆಬಾವಿಗಳ ಮರುಪೂರಣಕ್ಕೆ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಅಂಗನವಾಡಿ, ವಿದ್ಯಾರ್ಥಿನಿಲಯ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಮಳೆನೀರು ಸಂಗ್ರಹದ ವ್ಯವಸ್ಥೆ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು. ಪರಿಸರ ಸಂರಕ್ಷಣೆಯ ಕ್ರಾಂತಿ ಒಂದೇ ದಿನದಲ್ಲಿ ಸಾಧ್ಯವಿಲ್ಲ. ಇದು ಹಂತಹಂತವಾಗಿ ಜನಾಂದೋಲನವಾಗಿ ರೂಪುಗೊಳ್ಳಬೇಕು’ ಎಂದು ಹೇಳಿದರು.</p>.<p>‘ಬೂದು ನೀರು, ಕಪ್ಪು ನೀರು ನಿರ್ವಹಣೆ, ಸ್ವಚ್ಛತೆಗೆ ಸರ್ಕಾರದಲ್ಲಿ ಅನುದಾನದ ಲಭ್ಯತೆ ಇದೆ. ಇದಕ್ಕೆ ₹ 4,000 ಕೋಟಿಯನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಇದರಲ್ಲಿ ಒಂದಷ್ಟು ಭಾಗವನ್ನು ಜಿಲ್ಲೆಗೂ ತರಲು ಅವಕಾಶವಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿಗಳಾದ ಸಂತೋಷ್ ಪಾಟೀಲ್, ಅಭಿಷೇಕ್, ನಾಗರಿಕ ಹಿತರಕ್ಷಣಾ ಸಮಿತಿಯ ಈಶ್ವರಪ್ಪ, ರೈತ ಮುಖಂಡ ಸಿದ್ಧನೂರು ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>