<p>ನ್ಯಾಮತಿ: ‘ಅನುಭವ ಮಂಟಪದ ಮೂಲಕ ಜಾತಿ, ಮತ, ಪಂಥ ಎನ್ನದೇ ಸರ್ವರಿಗೂ ಮುಕ್ತ ಅವಕಾಶ ನೀಡಿದವರು ಬಸವಣ್ಣ’ ಎಂದು ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಲಿಂಗರಾಜು ಹವಳದ ಅಭಿಪ್ರಾಯಪಟ್ಟರು.</p>.<p>ಭಾನುವಾರ ಬಸವಾದಿ ಶರಣರ ಪರ ಸಂಘಟನೆಗಳು ಬಸವೇಶ್ವರ ಜಯಂತ್ಯುತ್ಸವ ಆಚರಣೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಏ. 25ರಂದು ಸಂಜೆ 4 ಗಂಟೆಗೆ ಕಲ್ಲುಮಠದಿಂದ ಅಲಂಕೃತ ವಾಹನದಲ್ಲಿ ಬಸವೇಶ್ವರರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಮಹಾಂತೇಶ್ವರ ಕಲ್ಯಾಣ ಮಂದಿರಕ್ಕೆ ತರಲಾಗುವುದು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾದನಭಾವಿ ಗುರುನಂಜಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮಹೇಶ್ವರಪ್ಪ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ಶಿವಯೋಗಿ, ಮುಖಂಡರಾದ ಎಚ್. ವಿರೂಪಾಕ್ಷಪ್ಪ, ಜಿ. ವಿಜಯಕುಮಾರ, ಮೆರವಣಿಗೆ ಜಯದೇವಪ್ಪ, ಕೆಂಚಿಕೊಪ್ಪ ಕೋಮೇಶ್ವರಪ್ಪ, ಮಂಡಕ್ಕಿ ಶಿವರಾಜ, ಆರುಂಡಿ ಬಿ.ಜಿ. ನಾಗರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-790975631</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ‘ಅನುಭವ ಮಂಟಪದ ಮೂಲಕ ಜಾತಿ, ಮತ, ಪಂಥ ಎನ್ನದೇ ಸರ್ವರಿಗೂ ಮುಕ್ತ ಅವಕಾಶ ನೀಡಿದವರು ಬಸವಣ್ಣ’ ಎಂದು ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಲಿಂಗರಾಜು ಹವಳದ ಅಭಿಪ್ರಾಯಪಟ್ಟರು.</p>.<p>ಭಾನುವಾರ ಬಸವಾದಿ ಶರಣರ ಪರ ಸಂಘಟನೆಗಳು ಬಸವೇಶ್ವರ ಜಯಂತ್ಯುತ್ಸವ ಆಚರಣೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಏ. 25ರಂದು ಸಂಜೆ 4 ಗಂಟೆಗೆ ಕಲ್ಲುಮಠದಿಂದ ಅಲಂಕೃತ ವಾಹನದಲ್ಲಿ ಬಸವೇಶ್ವರರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಮಹಾಂತೇಶ್ವರ ಕಲ್ಯಾಣ ಮಂದಿರಕ್ಕೆ ತರಲಾಗುವುದು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾದನಭಾವಿ ಗುರುನಂಜಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮಹೇಶ್ವರಪ್ಪ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ಶಿವಯೋಗಿ, ಮುಖಂಡರಾದ ಎಚ್. ವಿರೂಪಾಕ್ಷಪ್ಪ, ಜಿ. ವಿಜಯಕುಮಾರ, ಮೆರವಣಿಗೆ ಜಯದೇವಪ್ಪ, ಕೆಂಚಿಕೊಪ್ಪ ಕೋಮೇಶ್ವರಪ್ಪ, ಮಂಡಕ್ಕಿ ಶಿವರಾಜ, ಆರುಂಡಿ ಬಿ.ಜಿ. ನಾಗರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-790975631</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>