<p><strong>ಚೀಲೂರು (ನ್ಯಾಮತಿ):</strong> ಗ್ರಾಮದ ರಾಷ್ಟ್ರೀಯ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯಿಂದ ‘ಪ್ರಜಾವಾಣಿ’ ದಿನಪತ್ರಿಕೆ ವಿತರಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರಾಷ್ಟ್ರೀಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ, ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ವಿದ್ಯಾರ್ಥಿಗಳಿಗೆ ಪತ್ರಿಕೆ ವಿತರಿಸಿ ಮಾತನಾಡಿ, ‘ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಪ್ರತಿಯೊಬ್ಬರು ‘ಪ್ರಜಾವಾಣಿ’ ಓದುಗರೇ ಆಗಿದ್ದಾರೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ಒದಗಿಸುವ ಕಾರ್ಯಕ್ಕೆ ಸಹಕರಿಸಿದ ಗ್ರಾಮ ಪಂಚಾಯಿತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಯೋಜನೆ ರೂಪಿಸಿರುವ ದಿ ಪ್ರಿಂಟರ್ಸ್ ಮೈಸೂರು ಲಿಮಿಟಿಡ್ ಸಂಸ್ಥೆಯನ್ನು ಶ್ಲಾಘಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು, ಪಿಡಿಒ ಯೋಗೇಶನಾಯ್ಕ ಅವರು ಶಾಲೆಗೆ ಪತ್ರಿಕೆ ವಿತರಣೆಗೆ ಸಹಕಾರ ನೀಡಿದರು. </p>.<p>ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎಲ್.ಚಂದ್ರನಾಯ್ಕ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಬಾಬು, ಶಿಕ್ಷಕರಾದ ಎಸ್.ಪೂರ್ಣಿಮಾ, ಎಚ್.ಎಸ್. ಪ್ರಿಯಾದರ್ಶಿನಿ, ಡಿ.ಪಿ.ಆಶಾ, ಯಲ್ಲಪ್ಪ ದೊಡ್ಡಮನಿ, ಡಿ.ಎಚ್.ಸತೀಶ, ಎಚ್.ಎಂ.ತಿಪ್ಪೇಶಪ್ಪ, ಎಚ್.ಎನ್.ಮಂಜುನಾಥ, ಸಿಬ್ಬಂದಿ ಆರ್.ಲೋಕೇಶ, ಜೆ.ಸುಹಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೀಲೂರು (ನ್ಯಾಮತಿ):</strong> ಗ್ರಾಮದ ರಾಷ್ಟ್ರೀಯ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯಿಂದ ‘ಪ್ರಜಾವಾಣಿ’ ದಿನಪತ್ರಿಕೆ ವಿತರಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರಾಷ್ಟ್ರೀಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ, ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ವಿದ್ಯಾರ್ಥಿಗಳಿಗೆ ಪತ್ರಿಕೆ ವಿತರಿಸಿ ಮಾತನಾಡಿ, ‘ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಪ್ರತಿಯೊಬ್ಬರು ‘ಪ್ರಜಾವಾಣಿ’ ಓದುಗರೇ ಆಗಿದ್ದಾರೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ಒದಗಿಸುವ ಕಾರ್ಯಕ್ಕೆ ಸಹಕರಿಸಿದ ಗ್ರಾಮ ಪಂಚಾಯಿತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಯೋಜನೆ ರೂಪಿಸಿರುವ ದಿ ಪ್ರಿಂಟರ್ಸ್ ಮೈಸೂರು ಲಿಮಿಟಿಡ್ ಸಂಸ್ಥೆಯನ್ನು ಶ್ಲಾಘಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು, ಪಿಡಿಒ ಯೋಗೇಶನಾಯ್ಕ ಅವರು ಶಾಲೆಗೆ ಪತ್ರಿಕೆ ವಿತರಣೆಗೆ ಸಹಕಾರ ನೀಡಿದರು. </p>.<p>ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎಲ್.ಚಂದ್ರನಾಯ್ಕ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಬಾಬು, ಶಿಕ್ಷಕರಾದ ಎಸ್.ಪೂರ್ಣಿಮಾ, ಎಚ್.ಎಸ್. ಪ್ರಿಯಾದರ್ಶಿನಿ, ಡಿ.ಪಿ.ಆಶಾ, ಯಲ್ಲಪ್ಪ ದೊಡ್ಡಮನಿ, ಡಿ.ಎಚ್.ಸತೀಶ, ಎಚ್.ಎಂ.ತಿಪ್ಪೇಶಪ್ಪ, ಎಚ್.ಎನ್.ಮಂಜುನಾಥ, ಸಿಬ್ಬಂದಿ ಆರ್.ಲೋಕೇಶ, ಜೆ.ಸುಹಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>