<p>ನ್ಯಾಮತಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಎರಡು ಬೃಹದಾಕಾರದ ಮರಗಳ ಕೊಂಬೆಗಳು ವಿನೋಬನಗರ ಪಕ್ಕದ ರಸ್ತೆಗೆ ಚಾಚಿಕೊಂಡಿವೆ. ಗಾಳಿ, ಮಳೆಯಿಂದ ಕೊಂಬೆಗಳು ಮುರಿದು ಬೀಳುವ ಅಪಾಯವಿದ್ದು, ಆತಂಕ ಎದುರಾಗಿದೆ.</p>.<p>ಹಲವು ವರ್ಷಗಳ ಹಿಂದೆ ಪರಿಸರ ಸಂರಕ್ಷಣೆಗಾಗಿ ಪರಿಸರ ಮಿತ್ರ ಕೂಟದವರು ಸಸಿಗಳನ್ನು ನೆಟ್ಟು ಆರೈಕೆ ಮಾಡಿದ್ದರು. ಅವುಗಳು ಬೃಹದಾಕಾರವಾಗಿ ಬೆಳೆದು ನೆರಳು ನೀಡುತ್ತಿವೆ. ಆದರೆ ಮರದ ಕೊಂಬೆಗಳು ಮುರಿದು ಬೀಳುವಂತಿವೆ. ಅವುಗಳ ಕೆಳ ಭಾಗದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಅಪಾಯ ಎದುರಾಗುವ ಸಾಧ್ಯತೆಯಿದೆ.</p>.<p>ಸಾರ್ವಜನಿಕರು, ವಿದ್ಯಾರ್ಥಿಗಳು, ಅಂಗನವಾಡಿಯ ಚಿಣ್ಣರು ಇಲ್ಲಿ ಓಡಾಡುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿ, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕ ಗ್ರಂಥಾಲಯವೂ ಈ ಮಾರ್ಗದಲ್ಲಿವೆ. ಸಂಬಂಧಪಟ್ಟ ಕಾಲೇಜಿನ ಮುಖ್ಯಸ್ಥರು, ಎಸ್ಡಿಎಂಸಿ ಸದಸ್ಯರು, ಪಟ್ಟಣ ಪಂಚಾಯಿತಿ, ಬೆಸ್ಕಾಂನವರು ಗಮನಹರಿಸಿ ಅವಘಡ ಸಂಭವಿಸುವ ಮುನ್ನ ಅಪಾಯದ ಅಂಚಿನಲ್ಲಿರುವ ಕೊಂಬೆಗಳನ್ನು ತೆರವುಗೊಳಿಸಬೇಕು</p>.<p>ಶಬ್ಬೀರ್, ಶರಣಪ್ಪ, ಯಂಕಪ್ಪ ನಾಯಕ, ಸಣ್ಣವೀರಪ್ಪ, ನಿವಾಸಿಗಳು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-680999647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಎರಡು ಬೃಹದಾಕಾರದ ಮರಗಳ ಕೊಂಬೆಗಳು ವಿನೋಬನಗರ ಪಕ್ಕದ ರಸ್ತೆಗೆ ಚಾಚಿಕೊಂಡಿವೆ. ಗಾಳಿ, ಮಳೆಯಿಂದ ಕೊಂಬೆಗಳು ಮುರಿದು ಬೀಳುವ ಅಪಾಯವಿದ್ದು, ಆತಂಕ ಎದುರಾಗಿದೆ.</p>.<p>ಹಲವು ವರ್ಷಗಳ ಹಿಂದೆ ಪರಿಸರ ಸಂರಕ್ಷಣೆಗಾಗಿ ಪರಿಸರ ಮಿತ್ರ ಕೂಟದವರು ಸಸಿಗಳನ್ನು ನೆಟ್ಟು ಆರೈಕೆ ಮಾಡಿದ್ದರು. ಅವುಗಳು ಬೃಹದಾಕಾರವಾಗಿ ಬೆಳೆದು ನೆರಳು ನೀಡುತ್ತಿವೆ. ಆದರೆ ಮರದ ಕೊಂಬೆಗಳು ಮುರಿದು ಬೀಳುವಂತಿವೆ. ಅವುಗಳ ಕೆಳ ಭಾಗದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಅಪಾಯ ಎದುರಾಗುವ ಸಾಧ್ಯತೆಯಿದೆ.</p>.<p>ಸಾರ್ವಜನಿಕರು, ವಿದ್ಯಾರ್ಥಿಗಳು, ಅಂಗನವಾಡಿಯ ಚಿಣ್ಣರು ಇಲ್ಲಿ ಓಡಾಡುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿ, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕ ಗ್ರಂಥಾಲಯವೂ ಈ ಮಾರ್ಗದಲ್ಲಿವೆ. ಸಂಬಂಧಪಟ್ಟ ಕಾಲೇಜಿನ ಮುಖ್ಯಸ್ಥರು, ಎಸ್ಡಿಎಂಸಿ ಸದಸ್ಯರು, ಪಟ್ಟಣ ಪಂಚಾಯಿತಿ, ಬೆಸ್ಕಾಂನವರು ಗಮನಹರಿಸಿ ಅವಘಡ ಸಂಭವಿಸುವ ಮುನ್ನ ಅಪಾಯದ ಅಂಚಿನಲ್ಲಿರುವ ಕೊಂಬೆಗಳನ್ನು ತೆರವುಗೊಳಿಸಬೇಕು</p>.<p>ಶಬ್ಬೀರ್, ಶರಣಪ್ಪ, ಯಂಕಪ್ಪ ನಾಯಕ, ಸಣ್ಣವೀರಪ್ಪ, ನಿವಾಸಿಗಳು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-680999647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>