<p><strong>ನ್ಯಾಮತಿ</strong>: ಚಿನ್ನಾಭರಣ ಅಡವಿಟ್ಟು ಪಡೆದಿದ್ದ ಸಾಲ ಮರುಪಾವತಿಸಲು ಸಿದ್ಧರಿರುವ ಗ್ರಾಹಕರಿಗೆ ಬ್ಯಾಂಕ್ನಿಂದ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಈ ಕಾರಣಕ್ಕೆ ಗ್ರಾಹಕರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದಿಂದ ಬ್ಯಾಂಕ್ ವ್ಯವಸ್ಥಾಪಕರಿಗೆ ಬುಧವಾರ ನೋಟಿಸ್ ನೀಡಿದರು. </p>.<p>ನ್ಯಾಮತಿಯಲ್ಲಿನ ಎಸ್ಬಿಐ ಶಾಖೆಯಲ್ಲಿ 2024ರ ಅಕ್ಟೋಬರ್ 26ರಂದು ದರೋಡೆ ನಡೆದಿತ್ತು. 509 ಗ್ರಾಹಕರಿಗೆ ಸೇರಿದ್ದ 17 ಕೆ.ಜಿ. 705 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಪ್ರಕರಣ ಭೇದಿಸಿದ್ದ ಪೊಲೀಸರು ಮಾರ್ಚ್ 27ರಂದು 6 ಜನರನ್ನು ಬಂಧಿಸಿ 17 ಕೆ.ಜಿ. 100 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದರು. </p>.<p>ಈ ಚಿನ್ನಾಭರಣವನ್ನು ಗ್ರಾಹಕರಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಆರಂಭಿಸಿಲ್ಲ. ಆದರೂ, ಗ್ರಾಹಕರಿಗೆ ಸಾಲ ಮರುಪಾವತಿಸುವಂತೆ ನೋಟಿಸ್ ನೀಡಲಾಗಿತ್ತು. ಪೊಲೀಸರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ಗೊಂದಲದ ಹೇಳಿಕೆಯಿಂದ ಅಸಮಾಧಾನಗೊಂಡ ಗ್ರಾಹಕರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಮೊರೆ ಹೋಗಿದ್ದರು. ಇದೀಗ ಕೇಂದ್ರದ ಮೂಲಕವೇ ನೋಟಿಸ್ ಕೊಡಿಸಿದ್ದಾರೆ. </p>.<p>‘ಚಿನ್ನಾಭರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ, ಬ್ಯಾಂಕ್ನವರು ಕಾನೂನು ರೀತ್ಯಾ ನ್ಯಾಯಾಲಯದಿಂದ ಚಿನ್ನಾಭರಣ ಪಡೆಯಬೇಕು’ ಎಂದು ಪೊಲೀಸರು ಗ್ರಾಹಕರಿಗೆ ಉತ್ತರಿಸುತ್ತಾರೆ. </p>.<p>‘ಸಾಲಕ್ಕಾಗಿ ಅಡವಿಟ್ಟ ಗ್ರಾಹಕರ ಚಿನ್ನಾಭರಣ ವಿವರಗಳ ಚೀಟಿ, ಸಾಲ ಪಡೆದ ಮಾಹಿತಿಯನ್ನು ಚಿಕ್ಕ ಚೀಲದಲ್ಲಿ ಹಾಕಿ ಇಡಲಾಗಿತ್ತು. ಇದೀಗ ಚಿನ್ನಾಭರಣದ ಜೊತೆಗೆ ಚೀಟಿಗಳಿಲ್ಲ. ಚಿನ್ನಾಭರಣದ ನೈಜತೆ, ಅದರ ವಾರಸುದಾರರನ್ನು ಗುರುತಿಸಬೇಕಾಗಿದೆ. ಈ ಸಂಬಂಧ ಜಿಲ್ಲಾ ನ್ಯಾಯಾಲದಲ್ಲಿ ಪ್ರಕರಣ ಇದ್ದು, ಗುರುವಾರ ವಿಚಾರಣೆ ನಡೆಯಲಿದೆ. ಆ ಬಳಿಕ ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಬ್ಯಾಂಕ್ ವ್ಯವಸ್ಥಾಪಕರು ಗ್ರಾಹಕರಿಗೆ ಸಮಜಾಯಿಷಿ ನೀಡಿದರು. </p>.<p>ಚಿನ್ನಾಭರಣದ ಸಾಲ ತೀರಿಸಲು ನಾವು ಸಿದ್ಧರಿದ್ದೇವೆ ಎಂದು ಗ್ರಾಹಕರಾದ ಎಂ.ಎಚ್.ಮಂಜಪ್ಪ, ನಾಗರಾಜಪ್ಪ ಕೊಡಚಗೊಂಡನಹಳ್ಳಿ, ರವಿ ಚಟ್ನಹಳ್ಳಿ, ಉಮೇಶ ಕೆಂಚಿಕೊಪ್ಪ, ಜಯಚಂದ್ರ ರಾಮೇಶ್ವರ, ಸಿದ್ಧನಗೌಡ ಯರಗನಾಳ್, ನಾಗರಾಜ ಚಟ್ನಹಳ್ಳಿ, ಮಹೇಂದ್ರ ದೊಡ್ಡೇತ್ತಿನಹಳ್ಳಿ, ಶಿವಲಿಂಗಪ್ಪ ಯರಗನಾಳ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ಚಿನ್ನಾಭರಣ ಅಡವಿಟ್ಟು ಪಡೆದಿದ್ದ ಸಾಲ ಮರುಪಾವತಿಸಲು ಸಿದ್ಧರಿರುವ ಗ್ರಾಹಕರಿಗೆ ಬ್ಯಾಂಕ್ನಿಂದ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಈ ಕಾರಣಕ್ಕೆ ಗ್ರಾಹಕರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದಿಂದ ಬ್ಯಾಂಕ್ ವ್ಯವಸ್ಥಾಪಕರಿಗೆ ಬುಧವಾರ ನೋಟಿಸ್ ನೀಡಿದರು. </p>.<p>ನ್ಯಾಮತಿಯಲ್ಲಿನ ಎಸ್ಬಿಐ ಶಾಖೆಯಲ್ಲಿ 2024ರ ಅಕ್ಟೋಬರ್ 26ರಂದು ದರೋಡೆ ನಡೆದಿತ್ತು. 509 ಗ್ರಾಹಕರಿಗೆ ಸೇರಿದ್ದ 17 ಕೆ.ಜಿ. 705 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಪ್ರಕರಣ ಭೇದಿಸಿದ್ದ ಪೊಲೀಸರು ಮಾರ್ಚ್ 27ರಂದು 6 ಜನರನ್ನು ಬಂಧಿಸಿ 17 ಕೆ.ಜಿ. 100 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದರು. </p>.<p>ಈ ಚಿನ್ನಾಭರಣವನ್ನು ಗ್ರಾಹಕರಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಆರಂಭಿಸಿಲ್ಲ. ಆದರೂ, ಗ್ರಾಹಕರಿಗೆ ಸಾಲ ಮರುಪಾವತಿಸುವಂತೆ ನೋಟಿಸ್ ನೀಡಲಾಗಿತ್ತು. ಪೊಲೀಸರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ಗೊಂದಲದ ಹೇಳಿಕೆಯಿಂದ ಅಸಮಾಧಾನಗೊಂಡ ಗ್ರಾಹಕರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಮೊರೆ ಹೋಗಿದ್ದರು. ಇದೀಗ ಕೇಂದ್ರದ ಮೂಲಕವೇ ನೋಟಿಸ್ ಕೊಡಿಸಿದ್ದಾರೆ. </p>.<p>‘ಚಿನ್ನಾಭರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ, ಬ್ಯಾಂಕ್ನವರು ಕಾನೂನು ರೀತ್ಯಾ ನ್ಯಾಯಾಲಯದಿಂದ ಚಿನ್ನಾಭರಣ ಪಡೆಯಬೇಕು’ ಎಂದು ಪೊಲೀಸರು ಗ್ರಾಹಕರಿಗೆ ಉತ್ತರಿಸುತ್ತಾರೆ. </p>.<p>‘ಸಾಲಕ್ಕಾಗಿ ಅಡವಿಟ್ಟ ಗ್ರಾಹಕರ ಚಿನ್ನಾಭರಣ ವಿವರಗಳ ಚೀಟಿ, ಸಾಲ ಪಡೆದ ಮಾಹಿತಿಯನ್ನು ಚಿಕ್ಕ ಚೀಲದಲ್ಲಿ ಹಾಕಿ ಇಡಲಾಗಿತ್ತು. ಇದೀಗ ಚಿನ್ನಾಭರಣದ ಜೊತೆಗೆ ಚೀಟಿಗಳಿಲ್ಲ. ಚಿನ್ನಾಭರಣದ ನೈಜತೆ, ಅದರ ವಾರಸುದಾರರನ್ನು ಗುರುತಿಸಬೇಕಾಗಿದೆ. ಈ ಸಂಬಂಧ ಜಿಲ್ಲಾ ನ್ಯಾಯಾಲದಲ್ಲಿ ಪ್ರಕರಣ ಇದ್ದು, ಗುರುವಾರ ವಿಚಾರಣೆ ನಡೆಯಲಿದೆ. ಆ ಬಳಿಕ ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಬ್ಯಾಂಕ್ ವ್ಯವಸ್ಥಾಪಕರು ಗ್ರಾಹಕರಿಗೆ ಸಮಜಾಯಿಷಿ ನೀಡಿದರು. </p>.<p>ಚಿನ್ನಾಭರಣದ ಸಾಲ ತೀರಿಸಲು ನಾವು ಸಿದ್ಧರಿದ್ದೇವೆ ಎಂದು ಗ್ರಾಹಕರಾದ ಎಂ.ಎಚ್.ಮಂಜಪ್ಪ, ನಾಗರಾಜಪ್ಪ ಕೊಡಚಗೊಂಡನಹಳ್ಳಿ, ರವಿ ಚಟ್ನಹಳ್ಳಿ, ಉಮೇಶ ಕೆಂಚಿಕೊಪ್ಪ, ಜಯಚಂದ್ರ ರಾಮೇಶ್ವರ, ಸಿದ್ಧನಗೌಡ ಯರಗನಾಳ್, ನಾಗರಾಜ ಚಟ್ನಹಳ್ಳಿ, ಮಹೇಂದ್ರ ದೊಡ್ಡೇತ್ತಿನಹಳ್ಳಿ, ಶಿವಲಿಂಗಪ್ಪ ಯರಗನಾಳ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>