‘ಕೃಷಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪರಿಕರಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಗೊಬ್ಬರದ ದಾಸ್ತಾನು ಮತ್ತು ಅಗತ್ಯ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸಲಾಯಿತು. ನಾಮಫಲಕಗಳಲ್ಲಿ ದರಪಟ್ಟಿ ಪ್ರಕಟಿಸದ ಹಾಗೂ ದಾಸ್ತಾನು, ಮಾರಾಟಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆ ನಿರ್ವಹಣೆ ಮಾಡದಿರುವ ಮಾರಾಟಗಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ತೊಂದರೆಯಾಗದಂತೆ ಗೊಬ್ಬರ ಹಾಗೂ ಬೀಜ ವಿತರಣೆ ಮಾಡಬೇಕು. ಯಾವುದೇ ಲೋಪಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಕೆ ನೀಡಿದ್ದೇವೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ಶ್ರೀನಿವಾಸುಲು ತಿಳಿಸಿದರು.