<p><strong>ಮಲೇಬೆನ್ನೂರು: </strong>ಸೋಂಕಿತರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲು ಅಧಿಕಾರಿಗಳು ಮನವೊಲಿಸಲು ಹರಸಾಹಸಪಡುವಂತಾಗಿದೆ.</p>.<p>ಪಟ್ಟಣದಲ್ಲಿ ಪ್ರತಿನಿತ್ಯ ಸರಾಸರಿ 5 ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದು, ಅವರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ.</p>.<p>ಶನಿವಾರ ಪಟ್ಟಣದ ವಿವಿಧ ಬಡಾವಣೆಗಳ ಸೋಂಕಿತರ ಮನೆಗಳಿಗೆ ಪುರಸಭೆ ಮುಖ್ಯಾಧಿಕಾರಿ ನಿಟುವಳ್ಳಿ ದಿನಕರ್, ಪರಿಸರ ಎಂಜಿನಿಯರ್ ಉಮೇಶ್, ಆರೋಗ್ಯಾಧಿಕಾರಿ ಗುರುಪ್ರಸಾದ್, ನವೀನ್ ಕಟ್ಟೀಮನಿ, ಎಎಸ್ಐ ಹನುಮಂತಪ್ಪ ಭೇಟಿ ನೀಡಿ ಕೊರೊನಾ ತಡೆಗಟ್ಟಲು ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಕೋರಿದರು.</p>.<p>ಕೆಲವರು ಮನೆಯಲ್ಲೇ ಚಿಕಿತ್ಸೆ ನೀಡುವಂತೆ ಕೋರಿದರು. ಆದರೆ ಒಪ್ಪದ ಅಧಿಕಾರಿಗಳು ಕೊಂಡಜ್ಜಿ ಕೋವಿಡ್ ಕೇಂದ್ರಕ್ಕೆ ಕಳುಹಿಸಿದರು.</p>.<p>ಸಮೀಪದ ಕಡಾರನಾಯ್ಕನಹಳ್ಳಿ, ನಂದಿಗಾವಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ 100ಕ್ಕೂ ಹೆಚ್ಚು ನಾಗರಿಕರಿಗೆ ಕೊರೊನಾ ಲಸಿಕೆ ಹಾಕಿದರು.</p>.<p>ಟಿಎಚ್ಒ ಡಾ. ಚಂದ್ರಮೋಹನ್, ರೈತ ಸಂಘದ ಪ್ರಭುಗೌಡ, ಆರೋಗ್ಯ ನಿರೀಕ್ಷಕ ಉಮ್ಮಣ್ಣ, ಬಿಎಲ್ಒ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಸೋಂಕಿತರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲು ಅಧಿಕಾರಿಗಳು ಮನವೊಲಿಸಲು ಹರಸಾಹಸಪಡುವಂತಾಗಿದೆ.</p>.<p>ಪಟ್ಟಣದಲ್ಲಿ ಪ್ರತಿನಿತ್ಯ ಸರಾಸರಿ 5 ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದು, ಅವರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ.</p>.<p>ಶನಿವಾರ ಪಟ್ಟಣದ ವಿವಿಧ ಬಡಾವಣೆಗಳ ಸೋಂಕಿತರ ಮನೆಗಳಿಗೆ ಪುರಸಭೆ ಮುಖ್ಯಾಧಿಕಾರಿ ನಿಟುವಳ್ಳಿ ದಿನಕರ್, ಪರಿಸರ ಎಂಜಿನಿಯರ್ ಉಮೇಶ್, ಆರೋಗ್ಯಾಧಿಕಾರಿ ಗುರುಪ್ರಸಾದ್, ನವೀನ್ ಕಟ್ಟೀಮನಿ, ಎಎಸ್ಐ ಹನುಮಂತಪ್ಪ ಭೇಟಿ ನೀಡಿ ಕೊರೊನಾ ತಡೆಗಟ್ಟಲು ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಕೋರಿದರು.</p>.<p>ಕೆಲವರು ಮನೆಯಲ್ಲೇ ಚಿಕಿತ್ಸೆ ನೀಡುವಂತೆ ಕೋರಿದರು. ಆದರೆ ಒಪ್ಪದ ಅಧಿಕಾರಿಗಳು ಕೊಂಡಜ್ಜಿ ಕೋವಿಡ್ ಕೇಂದ್ರಕ್ಕೆ ಕಳುಹಿಸಿದರು.</p>.<p>ಸಮೀಪದ ಕಡಾರನಾಯ್ಕನಹಳ್ಳಿ, ನಂದಿಗಾವಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ 100ಕ್ಕೂ ಹೆಚ್ಚು ನಾಗರಿಕರಿಗೆ ಕೊರೊನಾ ಲಸಿಕೆ ಹಾಕಿದರು.</p>.<p>ಟಿಎಚ್ಒ ಡಾ. ಚಂದ್ರಮೋಹನ್, ರೈತ ಸಂಘದ ಪ್ರಭುಗೌಡ, ಆರೋಗ್ಯ ನಿರೀಕ್ಷಕ ಉಮ್ಮಣ್ಣ, ಬಿಎಲ್ಒ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>