ಚನ್ನಗಿರಿ: ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ಅಡಿಕೆ ತೋಟದಲ್ಲಿ ಇರುವ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಅದೇ ಗ್ರಾಮದ ಜಿ.ಎನ್.ಮಹೇಶ್ವರಪ್ಪ (73) ಮೃತ ವ್ಯಕ್ತಿ. ಅವರು ತಮ್ಮ ತೋಟದಲ್ಲಿ ಕೆಲಸ ಮಾಡಲು ಹೋಗುವಾಗ ಕೃಷಿ ಹೊಂಡದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.