ನೇಟಿವ್ ಕ್ರಿಯೇಷನ್ಸ್ ಬ್ಯಾನರ್ನಡಿ ಈ. ದೊಡ್ಡನಾಗಯ್ಯ ಚಿತ್ರ ನಿರ್ಮಿಸಿದ್ದು, ‘ಚಿನ್ನಾರಿಮುತ್ತ’ ಖ್ಯಾತಿಯ ನಟ ವಿಜಯರಾಘವೇಂದ್ರ ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ, ಉಮಾಶ್ರೀ, ನೀನಾಸಂ ಅಶ್ವತ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಸಂಭಾಷಣೆ ಬರೆದಿದ್ದಾರೆ. ಶ್ರೀಧರ್ ಸಂಭ್ರಮ್ ಸಂಗೀತ ಚಿತ್ರಕ್ಕಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.