ಸರಸ್ವತಿ ನಗರದ ನಿವಾಸಿ ರಾಜಪ್ಪ ಅವರ ಪುತ್ರಿ ಸೃಷ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.
ಬಿಐಇಟಿಯಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಇವರು ಮೂರು ಹಾಗೂ ನಾಲ್ಕನೇ ಸೆಮಿಸ್ಟರ್ಗಳಲ್ಲಿ 9 ವಿಷಯಗಳಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊರಗಡೆ ಹೋಗುತ್ತೇನೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೆಟಿಜೆ ನಗರ ಠಾಣೆಗೆ ಪ್ರಕರಣ ದಾಖಲಾಗಿದೆ.