<p><strong>ದಾವಣಗೆರೆ</strong>: ಕೊರೊನಾ ನಿಯಂತ್ರಿಸಲು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಸೇರಿ ಎಲ್ಲ ಎಡಪಕ್ಷಗಳಿಂದ ಆನ್ಲೈನ್ ಜನಾಂದೋಲನ ನಡೆಯಿತು.</p>.<p>ನಗರಗಳ ಎಲ್ಲ ವಾರ್ಡ್ಗಳಲ್ಲಿ, ಪಂಚಾಯಿತಿಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಎಲ್ಲ ಆಸ್ಪತ್ರೆಗಳಿಗೆ ಅವಶ್ಯಕ ಸಂಖ್ಯೆಯ ಹಾಸಿಗೆಗಳು, ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿಗಳನ್ನು ಒದಗಿಸಬೇಕು. ಆಮ್ಲಜನಕ, ವೆಂಟಿಲೇಟರ್, ಔಷಧಿಗಳ ಉಚಿತ ಸರಬರಾಜು ಇರಬೇಕು. ಎಲ್ಲ ಸೈನಿಕರ ಆಸ್ಪತ್ರೆಗಳನ್ನು ನಾಗರಿಕರ ಚಿಕಿತ್ಸೆಗೆ ತೆರೆದಿಡಬೇಕು ಎಂದು ಆಗ್ರಹಿಸಲಾಯಿತು.</p>.<p>ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಬೇಕು. ಸಾರ್ವಜ ನಿಕರ ತೆರಿಗೆಯಲ್ಲಿ ಸಂಬಳ ಪಡೆಯುವ ರಾಷ್ಟ್ರಪತಿ, ಉಪರಾಷ್ಟ್ರಪತಿ, ಕೇಂದ್ರ ಮತ್ತು ಎಲ್ಲಾ ರಾಜ್ಯಸಚಿವರು, ಸಂಸದರು ಮತ್ತು ಶಾಸಕರು ತಮ್ಮ ಒಂದು ವರ್ಷದ ಸಂಬಳವನ್ನು ನೀಡಬೇಕು. ಪಿಎಂ ಕೇರ್ಸ್ ಫಂಡಿನ ಪೂರ್ಣ ಮೊತ್ತವನ್ನು ಈ ಉದ್ದೇಶಕ್ಕಾಗಿ ಬಳಸಬೇಕು. ಶಿಕ್ಷಣ ಹೊರತುಪಡಿಸಿ, ಉಳಿದ ಕ್ಷೇತ್ರಗಳ ಬಜೆಟನ್ನು ಕಡಿತಗೊಳಿಸಿ, ಆರೋಗ್ಯ ಬಜೆಟನ್ನು ಹೆಚ್ಚಿಸಬೇಕು. ಈ ಮೂಲಕ ಸಂಗ್ರಹವಾಗುವ ಹಣವನ್ನು ಉದ್ಯೋಗ ಕಳೆದುಕೊಂಡ ಕಾರ್ಮಿಕರಿಗೆ, ನಿರುದ್ಯೋಗಿಗಳಿಗೆ ಮತ್ತು ಬಡವರಿಗೆ ಆರ್ಥಿಕ ನೆರವು ನೀಡಲು ಬಳಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ, ಮಂಜುನಾಥ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಪರಶುರಾಮ್, ಭಾರತಿ, ಪುಷ್ಪಾ, ಸರಸ್ವತಿ, ಪ್ರಕಾಶ್, ಗುರು, ಶಶಿಕುಮಾರ್, ಮಮತಾ, ಕಾವ್ಯಾ ಅವರೂ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೊರೊನಾ ನಿಯಂತ್ರಿಸಲು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಸೇರಿ ಎಲ್ಲ ಎಡಪಕ್ಷಗಳಿಂದ ಆನ್ಲೈನ್ ಜನಾಂದೋಲನ ನಡೆಯಿತು.</p>.<p>ನಗರಗಳ ಎಲ್ಲ ವಾರ್ಡ್ಗಳಲ್ಲಿ, ಪಂಚಾಯಿತಿಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಎಲ್ಲ ಆಸ್ಪತ್ರೆಗಳಿಗೆ ಅವಶ್ಯಕ ಸಂಖ್ಯೆಯ ಹಾಸಿಗೆಗಳು, ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿಗಳನ್ನು ಒದಗಿಸಬೇಕು. ಆಮ್ಲಜನಕ, ವೆಂಟಿಲೇಟರ್, ಔಷಧಿಗಳ ಉಚಿತ ಸರಬರಾಜು ಇರಬೇಕು. ಎಲ್ಲ ಸೈನಿಕರ ಆಸ್ಪತ್ರೆಗಳನ್ನು ನಾಗರಿಕರ ಚಿಕಿತ್ಸೆಗೆ ತೆರೆದಿಡಬೇಕು ಎಂದು ಆಗ್ರಹಿಸಲಾಯಿತು.</p>.<p>ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಬೇಕು. ಸಾರ್ವಜ ನಿಕರ ತೆರಿಗೆಯಲ್ಲಿ ಸಂಬಳ ಪಡೆಯುವ ರಾಷ್ಟ್ರಪತಿ, ಉಪರಾಷ್ಟ್ರಪತಿ, ಕೇಂದ್ರ ಮತ್ತು ಎಲ್ಲಾ ರಾಜ್ಯಸಚಿವರು, ಸಂಸದರು ಮತ್ತು ಶಾಸಕರು ತಮ್ಮ ಒಂದು ವರ್ಷದ ಸಂಬಳವನ್ನು ನೀಡಬೇಕು. ಪಿಎಂ ಕೇರ್ಸ್ ಫಂಡಿನ ಪೂರ್ಣ ಮೊತ್ತವನ್ನು ಈ ಉದ್ದೇಶಕ್ಕಾಗಿ ಬಳಸಬೇಕು. ಶಿಕ್ಷಣ ಹೊರತುಪಡಿಸಿ, ಉಳಿದ ಕ್ಷೇತ್ರಗಳ ಬಜೆಟನ್ನು ಕಡಿತಗೊಳಿಸಿ, ಆರೋಗ್ಯ ಬಜೆಟನ್ನು ಹೆಚ್ಚಿಸಬೇಕು. ಈ ಮೂಲಕ ಸಂಗ್ರಹವಾಗುವ ಹಣವನ್ನು ಉದ್ಯೋಗ ಕಳೆದುಕೊಂಡ ಕಾರ್ಮಿಕರಿಗೆ, ನಿರುದ್ಯೋಗಿಗಳಿಗೆ ಮತ್ತು ಬಡವರಿಗೆ ಆರ್ಥಿಕ ನೆರವು ನೀಡಲು ಬಳಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ, ಮಂಜುನಾಥ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಪರಶುರಾಮ್, ಭಾರತಿ, ಪುಷ್ಪಾ, ಸರಸ್ವತಿ, ಪ್ರಕಾಶ್, ಗುರು, ಶಶಿಕುಮಾರ್, ಮಮತಾ, ಕಾವ್ಯಾ ಅವರೂ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>