ವಿಚಾರ ಸಂಕಿರಣದಲ್ಲಿ ಆರಂಭಿಕ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಆಡಲಿದ್ದಾರೆ. ಶಾಲಾ ಶಿಕ್ಷಣ ಕುರಿತು ಪ್ರಾಧ್ಯಾಪಕ ಶ್ರೀಪಾದ ಭಟ್, ಉನ್ನತ ಶಿಕ್ಷಣ ಕುರಿತು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಮಾತನಾಡಲಿದ್ದಾರೆ. ಚರ್ಚೆಯಲ್ಲಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಅಲ್ಲಮಪ್ರಭು ಬೆಟದೂರು, ಸಿದ್ಧನಗೌಡ ಪಾಟೀಲ, ಕೆ.ಶರೀಫ್, ಆರ್.ಜಿ. ಹಳ್ಳಿ ನಾಗರಾಜ್ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.