ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾಬಸವಂತಪ್ಪ ಪಾಲ್ಗೊಳ್ಳಲಿದ್ದು, ಡಿ. 15ರಂದು ಸಂಜೆ 6ಕ್ಕೆ ಶಾಸಕ ರವೀಂದ್ರನಾಥ್ ಬಹುಮಾನ ವಿತರಣೆ ಮಾಡಲಿದ್ದಾರೆ. ಕಳೆದ ಬಾರಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 300 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಬಾರಿಯೂ ಹೆಚ್ಚಿನ ನಿರೀಕ್ಷೆ ಇದೆ. ವಿಜೇತರಿಗೆ ₹1.15 ಲಕ್ಷದವರೆಗೂ ಬಹುಮಾನ ಹಾಗೂ ಆಕರ್ಷಕ ಪಾರಿತೋಷಕ ನೀಡಲಾಗುವುದು ಎಂದರು.