<p><strong>ತಗ್ಗಿಹಳ್ಳಿ (ನ್ಯಾಮತಿ):</strong> ತಾಯಿಯ ಸಾವಿನ ನಂತರ ಅಂಗಾಂಗಳನ್ನು ದಾನ ಮಾಡುವ ಮೂಲಕ ಮಕ್ಕಳು ನೋವಿನಲ್ಲೂ ಸಾರ್ಥಕ್ಯ ಕಂಡುಕೊಂಡಿದ್ದಾರೆ.</p>.<p>ತಗ್ಗಿಹಳ್ಳಿ ಗ್ರಾಮದ ಗಾಯತ್ರಮ್ಮ (55) ಅವರ ಅಂಗಾಂಗಗಳನ್ನು ದಾನ ಮಾಡಲಾಯಿತು.</p>.<p>ಕಳೆದ ಬುಧವಾರ ಮಿದುಳಿನಲ್ಲಿ ಅತಿ ಹೆಚ್ಚು ರಕ್ತಸ್ರಾವವಾಗಿ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ, ನಂತರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳು ನಿಷ್ಕ್ರಿಯಗೊಂಡು ಗಾಯತ್ರಮ್ಮ ಅವರು ಶುಕ್ರವಾರ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಮೃತರ ಚಲನೆ ಇರುವ ದೇಹದ ಉಳಿದ ಭಾಗದ ಅಂಗಾಂಗಳಾದ ಹೃದಯ, ಕಿಡ್ನಿ, ಲಿವರ್, ಶ್ವಾಸಕೋಶ ಮತ್ತು ಎರಡು ಕಣ್ಣಿನ ಕಾರ್ನಿಯಾವನ್ನು ಬೆಂಗಳೂರಿನ ಎಚ್ಎಎಲ್ ರಸ್ತೆಯಲ್ಲಿನ ಮಣಿಪಾಲ ಆಸ್ಪತ್ರೆಗೆ ದಾನ ಮಾಡಲು ಅವರ ಮಕ್ಕಳು ತೀರ್ಮಾನಿಸಿದರು. ಆ ಮೂಲಕ ಅಂಗಾಂಗ ಕಸಿ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾದರು. ತಾಯಿಯ ಸಾವಿನ ದುಃಖದಲ್ಲೂ, ಸಾವನ್ನು ಸಾರ್ಥಕವಾಗಿಸಿದ ಮಕ್ಕಳ ಬಗ್ಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.</p>.<p>ಬೆಂಗಳೂರಿನ ಆರೋಗ್ಯ ಇಲಾಖೆಯ ಜೀವ ಸಾಕ್ಷರತಾ ಸಂಸ್ಥೆಗೆ ಅಂಗಾಂಗಳನ್ನು ಪಡೆಯಲು ಅನುಮತಿ ನೀಡಲಾಯಿತು. ಗ್ರಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಗ್ಗಿಹಳ್ಳಿ (ನ್ಯಾಮತಿ):</strong> ತಾಯಿಯ ಸಾವಿನ ನಂತರ ಅಂಗಾಂಗಳನ್ನು ದಾನ ಮಾಡುವ ಮೂಲಕ ಮಕ್ಕಳು ನೋವಿನಲ್ಲೂ ಸಾರ್ಥಕ್ಯ ಕಂಡುಕೊಂಡಿದ್ದಾರೆ.</p>.<p>ತಗ್ಗಿಹಳ್ಳಿ ಗ್ರಾಮದ ಗಾಯತ್ರಮ್ಮ (55) ಅವರ ಅಂಗಾಂಗಗಳನ್ನು ದಾನ ಮಾಡಲಾಯಿತು.</p>.<p>ಕಳೆದ ಬುಧವಾರ ಮಿದುಳಿನಲ್ಲಿ ಅತಿ ಹೆಚ್ಚು ರಕ್ತಸ್ರಾವವಾಗಿ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ, ನಂತರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳು ನಿಷ್ಕ್ರಿಯಗೊಂಡು ಗಾಯತ್ರಮ್ಮ ಅವರು ಶುಕ್ರವಾರ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಮೃತರ ಚಲನೆ ಇರುವ ದೇಹದ ಉಳಿದ ಭಾಗದ ಅಂಗಾಂಗಳಾದ ಹೃದಯ, ಕಿಡ್ನಿ, ಲಿವರ್, ಶ್ವಾಸಕೋಶ ಮತ್ತು ಎರಡು ಕಣ್ಣಿನ ಕಾರ್ನಿಯಾವನ್ನು ಬೆಂಗಳೂರಿನ ಎಚ್ಎಎಲ್ ರಸ್ತೆಯಲ್ಲಿನ ಮಣಿಪಾಲ ಆಸ್ಪತ್ರೆಗೆ ದಾನ ಮಾಡಲು ಅವರ ಮಕ್ಕಳು ತೀರ್ಮಾನಿಸಿದರು. ಆ ಮೂಲಕ ಅಂಗಾಂಗ ಕಸಿ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾದರು. ತಾಯಿಯ ಸಾವಿನ ದುಃಖದಲ್ಲೂ, ಸಾವನ್ನು ಸಾರ್ಥಕವಾಗಿಸಿದ ಮಕ್ಕಳ ಬಗ್ಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.</p>.<p>ಬೆಂಗಳೂರಿನ ಆರೋಗ್ಯ ಇಲಾಖೆಯ ಜೀವ ಸಾಕ್ಷರತಾ ಸಂಸ್ಥೆಗೆ ಅಂಗಾಂಗಳನ್ನು ಪಡೆಯಲು ಅನುಮತಿ ನೀಡಲಾಯಿತು. ಗ್ರಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>