<p><strong>ದಾವಣಗೆರೆ: </strong>ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ವತಿಯಿಂದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ರಾಜಶೇಖರ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಿ ಶನಿವಾರ ಮಕ್ಕಳ ದಿನವನ್ನು ಆಚರಿಸಿತು.</p>.<p>ಸಂಸ್ಥೆಯ ಅಧ್ಯಕ್ಷೆ ಭಾರತಿ ಕೇಶವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನಿರ್ದೇಶಕರ ಕಚೇರಿ ಅಧಿಕಾರಿ ಜಗದೀಶ್ವರ್ ಬಿ.ಎಸ್., ಮುಖ್ಯೋಪಾಧ್ಯಾಯರಾದ ಅಜ್ಜಣ್ಣ ಬಿ. ಉಪಸ್ಥಿತರಿದ್ದರು.</p>.<p>ಮಕ್ಕಳ ದಿನಾಚರಣೆಗೆ ಭಾನುವಾರ ಬಂದಿರುವುದರಿಂದ ಶನಿವಾರ ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಆಟಗಳನ್ನು ಆಡಿಸಲಾಯಿತು. ವಿಜೇತ ಮಕ್ಕಳಿಗೆ ಜಾಮಿಟ್ರಿ ಬಾಕ್ಸ್, ಎಕ್ಸಾಮ್ ಪ್ಯಾಡ್ , ಕ್ರಾಯೊನ್ಸ್ ವಿತರಿಸಲಾಯಿತು. ಎಲ್ಕೆಜಿ, ಯುಕೆಜಿ, ಒಂದನೇ ತರಗತಿ ಮತ್ತು ಎರಡನೇ ತರಗತಿಯ ಪುಟಾಣಿಗಳು ಭಾಗವಹಿಸಿದ್ದರು.ಮಕ್ಕಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಯಿತು.</p>.<p>ಪುಷ್ಪ ನಾರಾಯಣಸ್ವಾಮಿ, ಸುಧಾ ಶಿಲ್ಪಾ ರವಿ, ವಿಜಯ ಪಿ. ಹಳಕಟ್ಟಿ, ಪುಷ್ಪಾಂಜಲಿ ಸಿದ್ದೇಶ್ ಪ್ರಾಯೋಜಕತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ವತಿಯಿಂದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ರಾಜಶೇಖರ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಿ ಶನಿವಾರ ಮಕ್ಕಳ ದಿನವನ್ನು ಆಚರಿಸಿತು.</p>.<p>ಸಂಸ್ಥೆಯ ಅಧ್ಯಕ್ಷೆ ಭಾರತಿ ಕೇಶವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನಿರ್ದೇಶಕರ ಕಚೇರಿ ಅಧಿಕಾರಿ ಜಗದೀಶ್ವರ್ ಬಿ.ಎಸ್., ಮುಖ್ಯೋಪಾಧ್ಯಾಯರಾದ ಅಜ್ಜಣ್ಣ ಬಿ. ಉಪಸ್ಥಿತರಿದ್ದರು.</p>.<p>ಮಕ್ಕಳ ದಿನಾಚರಣೆಗೆ ಭಾನುವಾರ ಬಂದಿರುವುದರಿಂದ ಶನಿವಾರ ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಆಟಗಳನ್ನು ಆಡಿಸಲಾಯಿತು. ವಿಜೇತ ಮಕ್ಕಳಿಗೆ ಜಾಮಿಟ್ರಿ ಬಾಕ್ಸ್, ಎಕ್ಸಾಮ್ ಪ್ಯಾಡ್ , ಕ್ರಾಯೊನ್ಸ್ ವಿತರಿಸಲಾಯಿತು. ಎಲ್ಕೆಜಿ, ಯುಕೆಜಿ, ಒಂದನೇ ತರಗತಿ ಮತ್ತು ಎರಡನೇ ತರಗತಿಯ ಪುಟಾಣಿಗಳು ಭಾಗವಹಿಸಿದ್ದರು.ಮಕ್ಕಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಯಿತು.</p>.<p>ಪುಷ್ಪ ನಾರಾಯಣಸ್ವಾಮಿ, ಸುಧಾ ಶಿಲ್ಪಾ ರವಿ, ವಿಜಯ ಪಿ. ಹಳಕಟ್ಟಿ, ಪುಷ್ಪಾಂಜಲಿ ಸಿದ್ದೇಶ್ ಪ್ರಾಯೋಜಕತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>