ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕೋಳಿ, ಎಮ್ಮೆ ಸಾವು

Last Updated 5 ಅಕ್ಟೋಬರ್ 2021, 12:25 IST
ಅಕ್ಷರ ಗಾತ್ರ

ಮಾಯಕೊಂಡ: ದಾವಣಗೆರೆ ತಾಲ್ಲೂಕಿನ ಹುಚ್ಚವ್ವನಹಳ್ಳಿ ವಡ್ಡರಹಟ್ಟಿಯಲ್ಲಿ ದುಷ್ಕರ್ಮಿಗಳು ಪೆಟ್ರೋಲು ಸುರಿದು ದನದ ಕೊಟ್ಟಿಗೆಗೆ ಬೆಂಕಿ ಹಚ್ಚಲಾಗಿದೆ. ಒಂದು ಎಮ್ಮೆ ಸತ್ತಿದೆ. ಇನ್ನೊಂದು ಸಾವು ಬದುಕಿನ ಹೋರಾಟದಲ್ಲಿದೆ. 10ಕ್ಕೂ ಅಧಿಕ ಕೋಳಿಗಳು ಸುಟ್ಟುಹೋಗಿವೆ.

ವಡ್ಡರಹಟ್ಟಿಯ ಹನುಮಂತಪ್ಪ ಎನ್ನುವರಿಗೆ ಸೇರಿದ ಕೊಟ್ಟಿಗೆ ಇದಾಗಿದೆ. ಯಾರೋ ವೈಯಕ್ತಿಕ ದ್ವೇಷ ಇಟ್ಟುಕೊಂಡು ಬೆಂಕಿ ಹಚ್ಚಿರಬೇಕು ಎಂದು ಶಂಕಿಸಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಹನುಮಂತ ಅವರಿಗೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಮಾಯಕೊಂಡ ಠಾಣೆ ಪೊಲೀಸ ಭೇಟಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT