ವಡ್ಡರಹಟ್ಟಿಯ ಹನುಮಂತಪ್ಪ ಎನ್ನುವರಿಗೆ ಸೇರಿದ ಕೊಟ್ಟಿಗೆ ಇದಾಗಿದೆ. ಯಾರೋ ವೈಯಕ್ತಿಕ ದ್ವೇಷ ಇಟ್ಟುಕೊಂಡು ಬೆಂಕಿ ಹಚ್ಚಿರಬೇಕು ಎಂದು ಶಂಕಿಸಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಹನುಮಂತ ಅವರಿಗೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಮಾಯಕೊಂಡ ಠಾಣೆ ಪೊಲೀಸ ಭೇಟಿ ಪರಿಶೀಲನೆ ನಡೆಸಿದ್ದಾರೆ.