ಬಿಸಿಎಂ ಇಲಾಖೆಯಲ್ಲಿ ಹೆಚ್ಚುವರಿ ನೌಕರರಿಗೆ ಫೆಬ್ರುವರಿ ತಿಂಗಳಲ್ಲಿ 6 ತಿಂಗಳ ವೇತನ ಬಿಡುಗಡೆಯಾಗಿದ್ದು, ಈ ಬಾಕಿ ಇರುವ ವೇತನದ ಹಣವನ್ನು ಪಾವತಿಸಬೇಕು. ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಿರುವ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.
ಹೊರಗುತ್ತಿಗೆ ಕಾರ್ಮಿಕರು ಮತ್ತು ಅವರ ಕುಟುಂಬದವರು ಕೋವಿಡ್–19ನಿಂದ ಬಳಲಿದರೆ ಅದರ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು. ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ವಿಶೇಷ ಜೀವ ವಿಮೆ ಸೌಲಭ್ಯವನ್ನು ಇವರಿಗೂ ವಿಸ್ತರಿಸಬೇಕು. ನೇರ ನೇಮಕಾತಿಯಿಂದ ತೊಂದರೆಗೊಳಗಾದ ಗುತ್ತಿಗೆ ಕಾರ್ಮಿಕರನ್ನು ಸೇವಾ ಹಿರಿತನಕ್ಕನುಗುಣವಾಗಿ ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.