‘ಈಗ ಖಾಸಗಿ ವ್ಯಾಪಾರಿಗಳು ಒಂದು ಕ್ವಿಂಟಲ್ ಭತ್ತಕ್ಕೆ ₹ 2,150 ದರದಂತೆ ಖರೀದಿಸುತ್ತಿದ್ದಾರೆ. ಅಲ್ಲದೇ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ದಿನ ದಿನಕ್ಕೂ ಕುಸಿತವಾಗುತ್ತಿದೆ. ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದೆ. ಒಂದು ಎಕರೆ ಭತ್ತದ ಬೆಳೆಗೆ ₹ 25,000ಕ್ಕೂ ಹೆಚ್ಚು ಖರ್ಚು ಬರುತ್ತಿದ್ದು, ಕೇಂದ್ರ ಸರ್ಕಾರ ಒಂದು ಕ್ವಿಂಟಲ್ ಭತ್ತಕ್ಕೆ ₹ 1,940 ನಿಗದಿಪಡಿಸಿದೆ. ಆದರೆ ಇಡೀ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ಸರ್ಕಾರ ಈವರೆಗೂ ಆರಂಭಿಸಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರತಿ ಕ್ವಿಂಟಲ್ಗೆ ಕನಿಷ್ಠ ₹ 2,800ನ್ನು ನಿಗದಿಪಡಿಸಿ ಖರೀದಿಸಬೇಕು’ ಎಂದು ರೈತ ಸಂಘದ ತಾಲ್ಲೂಕು ಹಸಿರು ಸೇನೆ ಅಧ್ಯಕ್ಷ ಎಸ್.ಆರ್. ರವಿಕುಮಾರ್ ಒತ್ತಾಯಿಸಿದ್ದಾರೆ.