ಮಲೇಬೆನ್ನೂರು:ಪ್ರಸಕ್ತ ಹಸ್ತಾ ಮಳೆ ಆರ್ಭಟ ಮುಂದುವರಿದಿದ್ದು, ಹೋಬಳಿ ವ್ಯಾಪ್ತಿಯ ಗುಳದಹಳ್ಳಿ, ಸಂಕ್ಲೀಪುರ, ಆದಾಪುರ, ನಿಟ್ಟೂರು ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತವಾಗಿವೆ.
ಎರಡು ದಿನಗಳಿಂದ ಸಂಜೆಯ ಬಳಿಕ ಸಿಡಿಲು, ಗುಡುಗು, ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ.
ಇದರಿಂದಾಗಿ ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಜಲಾವೃತವಾಗಿವೆ. ಮೆಕ್ಕೆಜೋಳದ ಹೊಲಗಳಲ್ಲಿ ನೀರು ನಿಂತಿದೆ. ಕೆಲವೆಡೆ ಒಡ್ಡು ಒಡೆದಿವೆ ಎಂದು ಕೊಮಾರನಹಳ್ಳಿ, ಹಾಲಿವಾಣ, ಕೊಪ್ಪದ ರೈತರು ಆತಂಕ ವ್ಯಕ್ತಪಡಿಸಿದರು.
ಮಳೆಯಿಂದ ಹೆಂಚು ಹಾಗೂ ತಾರಸಿ ಮನೆಗಳಲ್ಲಿ ನೀರು ಸುರಿಯುತ್ತಿದೆ.