<p><strong>ದಾವಣಗೆರೆ: </strong>ಕೊರೊನಾ ಕಿಟ್, ಇತರ ಪರಿಕರ ಖರೀದಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಪೈಸೆ ಪೈಸೆ ಲೆಕ್ಕ ಇದೆ. ಸಿದ್ದರಾಮಯ್ಯ ಕೇಳಿದರೆ ಈ ಲೆಕ್ಕ ಕೊಡಲು ಸಿದ್ಧ. ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ತಾಯಿ– ಮಕ್ಕಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ರಾಜಕೀಯದಲ್ಲಿ ಅನುಭವ ಇರುವವರು. ಆಧಾರ ಇಲ್ಲದೇ ಈ ರೀತಿ ಆರೋಪ ಮಾಡಬಾರದು. ಕುಣಿಯಲು ಬಾರದವ ನೆಲ ಡೊಂಕು ಎಂಬಂತಿದೆ ಇದು. ಅವರಿಗೆ ಶಕ್ತಿ ಇದ್ದರೆ ತನಿಖೆ ನಡೆಸಲು. ನಾವು ಯಾವುದೇ ತನಿಖೆ ಎದುರಿಸಲು ಸಿದ್ಧ. ಶ್ವೇತಪತ್ರ ಹೊರಡಿಸಲೂ ತಯಾರು’ ಎಂದು ಪ್ರತಿಕ್ರಿಯಿಸಿದರು.</p>.<p>‘ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾರ್ಯವನ್ನು ದೇಶವೇ ಪ್ರಶಂಸಿಸಿದೆ. ನಾವು ಕೋವಿಡ್ಗೆ ಸಂಬಂಧಿಸಿದಂತೆ ಜನರನ್ನು ಪರೀಕ್ಷೆಗೆ ಒಳಪಡಿಸುವ, ಸ್ವ್ಯಾಬ್ ತೆಗೆಯುವ ವಿಚಾರದಲ್ಲಿ ದೇಶಕ್ಕೆ ಮೂರನೇ ಸ್ಥಾನದಲ್ಲಿದ್ದೇವೆ’ ಎಂದು ವಿವರಿಸಿದರು.</p>.<p>ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅವರ ಅಭಿಮಾನಿಗಳು ಎಲ್ಲೂ ಕೊರೊನಾ ಕಾರ್ಯದಲ್ಲಿ ತೊಡಗಿಸಿಕೊಂಡಿಲ್ಲ. ಪ್ರಚಾರಕ್ಕಾಗಿ ಈ ರೀತಿ ಆರೋಪ ಮಾಡುವ ಬದಲು ನಮ್ಮ ಜತೆ ಕೈ ಜೋಡಿಸಿ ಎಂದು ಸಲಹೆ ನೀಡಿದರು.</p>.<p>ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಉದ್ದೇಶವಿಲ್ಲ. ಆದರೆ ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಮುಂದುವರಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಚಿವರ ನಡುವೆ ಸಮನ್ವಯತೆ ಇಲ್ಲ ಎನ್ನುವುದು ಸುಳ್ಳು. ನಾವೆಲ್ಲ ಭಾರತೀಯ ಜನತಾ ಪಾರ್ಟಿಯವರು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಜಸ್ಟೀಸ್ ನಾಗಮೋಹನದಾಸ್ ವರದಿ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿಯನ್ನು ಮುಖ್ಯಮಂತ್ರಿ ನೇತೃತ್ವದಲ್ಲಿ ಕೆಲವೇ ತಿಂಗಳುಗಳಲ್ಲಿ ಜಾರಿ ಮಾಡಲಿದ್ದೇವೆ. ಕೊರೊನಾ ಮುಗಿದ ತಕ್ಷಣ ಜಾರಿಗೆ ಬರಲಿದೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೊರೊನಾ ಕಿಟ್, ಇತರ ಪರಿಕರ ಖರೀದಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಪೈಸೆ ಪೈಸೆ ಲೆಕ್ಕ ಇದೆ. ಸಿದ್ದರಾಮಯ್ಯ ಕೇಳಿದರೆ ಈ ಲೆಕ್ಕ ಕೊಡಲು ಸಿದ್ಧ. ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ತಾಯಿ– ಮಕ್ಕಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ರಾಜಕೀಯದಲ್ಲಿ ಅನುಭವ ಇರುವವರು. ಆಧಾರ ಇಲ್ಲದೇ ಈ ರೀತಿ ಆರೋಪ ಮಾಡಬಾರದು. ಕುಣಿಯಲು ಬಾರದವ ನೆಲ ಡೊಂಕು ಎಂಬಂತಿದೆ ಇದು. ಅವರಿಗೆ ಶಕ್ತಿ ಇದ್ದರೆ ತನಿಖೆ ನಡೆಸಲು. ನಾವು ಯಾವುದೇ ತನಿಖೆ ಎದುರಿಸಲು ಸಿದ್ಧ. ಶ್ವೇತಪತ್ರ ಹೊರಡಿಸಲೂ ತಯಾರು’ ಎಂದು ಪ್ರತಿಕ್ರಿಯಿಸಿದರು.</p>.<p>‘ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾರ್ಯವನ್ನು ದೇಶವೇ ಪ್ರಶಂಸಿಸಿದೆ. ನಾವು ಕೋವಿಡ್ಗೆ ಸಂಬಂಧಿಸಿದಂತೆ ಜನರನ್ನು ಪರೀಕ್ಷೆಗೆ ಒಳಪಡಿಸುವ, ಸ್ವ್ಯಾಬ್ ತೆಗೆಯುವ ವಿಚಾರದಲ್ಲಿ ದೇಶಕ್ಕೆ ಮೂರನೇ ಸ್ಥಾನದಲ್ಲಿದ್ದೇವೆ’ ಎಂದು ವಿವರಿಸಿದರು.</p>.<p>ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅವರ ಅಭಿಮಾನಿಗಳು ಎಲ್ಲೂ ಕೊರೊನಾ ಕಾರ್ಯದಲ್ಲಿ ತೊಡಗಿಸಿಕೊಂಡಿಲ್ಲ. ಪ್ರಚಾರಕ್ಕಾಗಿ ಈ ರೀತಿ ಆರೋಪ ಮಾಡುವ ಬದಲು ನಮ್ಮ ಜತೆ ಕೈ ಜೋಡಿಸಿ ಎಂದು ಸಲಹೆ ನೀಡಿದರು.</p>.<p>ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಉದ್ದೇಶವಿಲ್ಲ. ಆದರೆ ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಮುಂದುವರಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಚಿವರ ನಡುವೆ ಸಮನ್ವಯತೆ ಇಲ್ಲ ಎನ್ನುವುದು ಸುಳ್ಳು. ನಾವೆಲ್ಲ ಭಾರತೀಯ ಜನತಾ ಪಾರ್ಟಿಯವರು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಜಸ್ಟೀಸ್ ನಾಗಮೋಹನದಾಸ್ ವರದಿ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿಯನ್ನು ಮುಖ್ಯಮಂತ್ರಿ ನೇತೃತ್ವದಲ್ಲಿ ಕೆಲವೇ ತಿಂಗಳುಗಳಲ್ಲಿ ಜಾರಿ ಮಾಡಲಿದ್ದೇವೆ. ಕೊರೊನಾ ಮುಗಿದ ತಕ್ಷಣ ಜಾರಿಗೆ ಬರಲಿದೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>