ದಾವಣಗೆರೆ:ನಗರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆಸುತ್ತಿರುವ ‘ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೇಯರ್ ಬಿ.ಜಿ.ಅಜಯ್ಕುಮಾರ್ ಹೇಳಿದರು.
18ನೇ ವಾರ್ಡ್ನ ಕಾಯಿಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕಾರ್ಯಕ್ರಮ ಯಶಸ್ವಿ ಯಾಗಿ ನಡೆದಿದ್ದು, ಆಸ್ತಿ ತೆರಿಗೆ ಮತ್ತು ನೀರಿನ ದರದಿಂದ ₹ 4,30,468 ಸಂಗ್ರಹವಾಗಿದೆ. 26 ಉದ್ದಿಮೆಗಳಿಗೆ ಪರವಾನಗಿ ನೀಡಿದ್ದು, ಇದರಿಂದ ₹ 58,225 ಸಂಗ್ರಹವಾಗಿದೆ’ ಎಂದರು.
‘ಕಟ್ಟಡ ಪರವಾನಗಿ, ಬೀದಿ ದೀಪ, ಎಂಜಿನಿಯರಿಂಗ್ ಶಾಖೆಗೆ ಮತ್ತು ಇತರೆ ದೂರುಗಳಿಗೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಬಂದಿದ್ದು, ಸೂಕ್ತ ದಾಖಲಾತಿಗಳನ್ನು ಪಡೆದು ಸ್ಥಳದಲ್ಲಿಯೇ ಕೆಲಸ ಮಾಡಿಕೊಡಲಾಗುತ್ತಿದೆ. ವಾರದಲ್ಲಿ ಮೂರು ದಿನ ನಿಗದಿಪಡಿಸಿದ ವಾರ್ಡ್ಗಳಿಗೆ ಭೇಟಿ ನೀಡುತ್ತಿದ್ದು, ಆಯಾ ವಾರ್ಡ್ನ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದೇವೆ’ ಎಂದು ಅವರು ತಿಳಿಸಿದರು.