ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ದಾವಣಗೆರೆ | ಪಂಚಗ್ಯಾರಂಟಿ: ₹ 2,256 ಕೋಟಿ ವೆಚ್ಚ

ಜನರ ಬದುಕಿಗೆ ಬೆಳಕಾದ ಯೋಜನೆ: ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ
Published : 18 ಅಕ್ಟೋಬರ್ 2025, 7:08 IST
Last Updated : 18 ಅಕ್ಟೋಬರ್ 2025, 7:08 IST
ಫಾಲೋ ಮಾಡಿ
Comments
12 ಪ್ರಕರಣ ದಾಖಲು
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡಿದ ಹಾಗೂ ತೂಕದಲ್ಲಿ ಮೋಸ ಮಾಡಿದ 12 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. ಫಲಾನುಭವಿಗಳ ಬಳಿ ಹಣ ವಸೂಲಿ ಸೇರಿದಂತೆ ಹಲವು ಲೋಪದೋಷಗಳನ್ನು ಗಮನಿಸಿ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತಿನಲ್ಲಿಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ‘ಅಕ್ರಮವಾಗಿ ದಾಸ್ತಾನು ಮಾಡಿದ್ದ 450 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ 150 ಕ್ವಿಂಟಾಲ್ ರಾಗಿ ವಶಪಡಿಸಿಕೊಳ್ಳಲಾಗಿದೆ. ಅಹಾರ ಪಡಿತರ ವಿತರಣೆ ವೇಳೆ ತೂಕದಲ್ಲಿ ವ್ಯತ್ಯಾಸ ಮಾಡಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು. 2023ರಿಂದ ಈವರೆಗೆ ಜಿಲ್ಲೆಯಲ್ಲಿ 3312 ಫಲಾನುಭವಿಗಳು ಮರಣ ಹೊಂದಿದ್ದಾರೆ. ಇದರಲ್ಲಿ 215 ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ ₹ 25.60 ಲಕ್ಷವನ್ನು ಸರ್ಕಾರಕ್ಕೆ ಮರುಪಾವತಿಸಲಾಗಿದೆ.
ಬೆಳಿಗ್ಗೆ 6ರಿಂದ ಪಡಿತರ ವಿತರಣೆ
‘ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್‌ ಸೂಚನೆ ನೀಡಿದರು. ‘ಯುವನಿಧಿ ಯೋಜನೆ ಬಗ್ಗೆ ಸಾಕಷ್ಟು ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲ. ಜಿಲ್ಲೆಯ ಶಾಲಾ- ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅಭಿಯಾನ ಹಮ್ಮಿಕೊಂಡು ವ್ಯಾಪಕ ಅರಿವು ಮೂಡಿಬೇಕು’ ಎಂದು ತಾಕೀತು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT