<p><strong>ದಾವಣಗೆರೆ:</strong> ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆಸಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮುಗಿಸಲು ಪೊಲೀಸ್ ಅಧಿಕಾರಿಗಳೇ ಸಂಚು ರೂಪಿಸಿದ್ದರು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು.</p><p>‘ಸ್ವಾಮೀಜಿಯನ್ನು ಮುಗಿಸಿದರೆ ಮೀಸಲಾತಿ ಹೋರಾಟ ನಿಲ್ಲುತ್ತದೆ ಎಂದು ಪೊಲೀಸರು ಭಾವಿಸಿದ್ದರು. ಸಮುದಾಯದವರ ಜೊತೆಗೆ ಸ್ವಾಮೀಜಿ ಮೇಲೂ ಹಲ್ಲೆ ನಡೆಸಿರುವುದು ಖಂಡನೀಯ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p><p>‘ಕಿತ್ತೂರು ರಾಣಿ ಚನ್ನಮ್ಮಳ ವಂಶಸ್ಥರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಇದನ್ನು ಎಲ್ಲ ಸಮುದಾಯಗಳ ಮಠಾಧೀಶರು ಖಂಡಿಸಬೇಕು. ಇಲ್ಲವಾದರೆ ಯಾರಿಗೂ ಉಳಿಗಾಲವಿಲ್ಲದಂತಾಗುತ್ತದೆ’ ಎಂದರು.</p><p>‘ಲಾಠಿ ಚಾರ್ಜ್ ಬದಲು ಮುತ್ತು ಕೊಡಬೇಕಿತ್ತಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಹೋರಾಟದ ದಿಕ್ಕು ತಪ್ಪಿಸಲು ಅವರೇ ಕಲ್ಲು ತೂರಾಟಕ್ಕೆ ಕುಮ್ಮಕ್ಕು ನೀಡಿರಬಹುದು’ ಎಂದು ದೂರಿದರು.</p>.ತಾಕತ್ತಿದ್ದರೆ ಹೋರಾಟದಲ್ಲಿ ಭಾಗಿಯಾದ ಶಾಸಕರನ್ನು ವಜಾ ಮಾಡಿ:CMಗೆ ಮೃತ್ಯುಂಜಯ ಶ್ರೀ.ಸಿದ್ದರಾಮಯ್ಯ ಹೃದಯಹೀನ ಮುಖ್ಯಮಂತ್ರಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಿಡಿ.Video | ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಸಿಎಂ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪ.ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅಸಾಧ್ಯ: ಸಿದ್ದರಾಮಯ್ಯ .ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ: ಸಿದ್ದರಾಮಯ್ಯ.ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ: ಮುಖ್ಯಮಂತ್ರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆಸಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮುಗಿಸಲು ಪೊಲೀಸ್ ಅಧಿಕಾರಿಗಳೇ ಸಂಚು ರೂಪಿಸಿದ್ದರು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು.</p><p>‘ಸ್ವಾಮೀಜಿಯನ್ನು ಮುಗಿಸಿದರೆ ಮೀಸಲಾತಿ ಹೋರಾಟ ನಿಲ್ಲುತ್ತದೆ ಎಂದು ಪೊಲೀಸರು ಭಾವಿಸಿದ್ದರು. ಸಮುದಾಯದವರ ಜೊತೆಗೆ ಸ್ವಾಮೀಜಿ ಮೇಲೂ ಹಲ್ಲೆ ನಡೆಸಿರುವುದು ಖಂಡನೀಯ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p><p>‘ಕಿತ್ತೂರು ರಾಣಿ ಚನ್ನಮ್ಮಳ ವಂಶಸ್ಥರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಇದನ್ನು ಎಲ್ಲ ಸಮುದಾಯಗಳ ಮಠಾಧೀಶರು ಖಂಡಿಸಬೇಕು. ಇಲ್ಲವಾದರೆ ಯಾರಿಗೂ ಉಳಿಗಾಲವಿಲ್ಲದಂತಾಗುತ್ತದೆ’ ಎಂದರು.</p><p>‘ಲಾಠಿ ಚಾರ್ಜ್ ಬದಲು ಮುತ್ತು ಕೊಡಬೇಕಿತ್ತಾ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಹೋರಾಟದ ದಿಕ್ಕು ತಪ್ಪಿಸಲು ಅವರೇ ಕಲ್ಲು ತೂರಾಟಕ್ಕೆ ಕುಮ್ಮಕ್ಕು ನೀಡಿರಬಹುದು’ ಎಂದು ದೂರಿದರು.</p>.ತಾಕತ್ತಿದ್ದರೆ ಹೋರಾಟದಲ್ಲಿ ಭಾಗಿಯಾದ ಶಾಸಕರನ್ನು ವಜಾ ಮಾಡಿ:CMಗೆ ಮೃತ್ಯುಂಜಯ ಶ್ರೀ.ಸಿದ್ದರಾಮಯ್ಯ ಹೃದಯಹೀನ ಮುಖ್ಯಮಂತ್ರಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಿಡಿ.Video | ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಸಿಎಂ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪ.ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅಸಾಧ್ಯ: ಸಿದ್ದರಾಮಯ್ಯ .ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ: ಸಿದ್ದರಾಮಯ್ಯ.ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ: ಮುಖ್ಯಮಂತ್ರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>