<p><strong>ಹರಪನಹಳ್ಳಿ</strong>: ಅಕ್ಟೋಬರ್ 1ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡದಿದ್ದರೆ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಪಂಚಮಸಾಲಿ ಸಮಾಜದಿಂದ ಹಮ್ಮಿಕೊಂಡಿದ್ದ ಪಂಚಾಯತ್ ಪ್ರತಿಜ್ಞೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸರ್ಕಾರಕ್ಕೆ ಕೊಟ್ಟಿರುವ ಗಡುವು ಈಗಾಗಲೇ ಮುಗಿದಿದೆ. ನಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತದೆ ಎಂಬ ಭರವಸೆ ಇಟ್ಟಿದ್ದೇವೆ. ಈಡೇರಿಸದಿದ್ದರೇ ಸಮಾಜದವರು ಹೋರಾಟಕ್ಕೆ ಬೆಂಗಳೂರಿಗೆ ಬರಬೇಕು’ ಎಂದು ಕರೆ ನೀಡಿದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವ ತನಕ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಿರಂತರವಾಗಿರುತ್ತದೆ’ ಎಂದು ಹೇಳಿದರು.</p>.<p>ಮುಂದಿನ ಚುನಾವಣೆಯಲ್ಲಿ ಸಮಾಜದವರು ಪಕ್ಷಾತೀತವಾಗಿ ಸಮಾಜದ ಅಭ್ಯರ್ಥಿಯನ್ನೇ ಬೆಂಬಲಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಪಂಚಾಯತ್ ಪ್ರತಿಜ್ಞೆ ತಂಡ ಮತ್ತು ಸ್ವಾಮೀಜಿ ಅವರನ್ನು ಮಹಿಳೆಯರು ಪೂರ್ಣ ಕುಂಭ ಮತ್ತು ಆರತಿ ಬೆಳಗಿ ಸ್ವಾಗತಿಸಿದರು.</p>.<p>ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ. ಎಚ್.ಎಸ್. ಶಿವಶಂಕರ್, ಅಕ್ಷರ ಸೀಡ್ಸ್ ಕಂಪನಿ ಮಾಲೀಕ ಅರಸೀಕೆರೆ ಎನ್. ಕೊಟ್ರೇಶ್, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್ ಚಂದ್ರ, ಮಾಜಿ ಮೇಯರ್ ಅಜಯ್<br />ಕುಮಾರ್, ಜಿಲ್ಲಾ ಅಧ್ಯಕ್ಷ ಭದ್ರವಾಡಿ ಚಂದ್ರಶೇಖರ್, ಮಲ್ಲಿಕಾರ್ಜುನ ಗೌಡ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಪೂಜಾರ, ಅಡವಿಹಳ್ಳಿ ಬಸವರಾಜ್, ಮತ್ತಿಹಳ್ಳಿ ಅಜ್ಜಣ್ಣ, ಎ. ವೀರಣ್ಣ, ಶಂಬಣ್ಣ, ಕೊಟ್ರೇಶಪ್ಪ, ಪ್ರಕಾಶ್ ಪಾಟೀಲ್, ಜಗದೀಶ್, ಶಾರದಮ್ಮ ಕೊಟ್ರೇಶ್ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ಅಕ್ಟೋಬರ್ 1ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡದಿದ್ದರೆ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಪಂಚಮಸಾಲಿ ಸಮಾಜದಿಂದ ಹಮ್ಮಿಕೊಂಡಿದ್ದ ಪಂಚಾಯತ್ ಪ್ರತಿಜ್ಞೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸರ್ಕಾರಕ್ಕೆ ಕೊಟ್ಟಿರುವ ಗಡುವು ಈಗಾಗಲೇ ಮುಗಿದಿದೆ. ನಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತದೆ ಎಂಬ ಭರವಸೆ ಇಟ್ಟಿದ್ದೇವೆ. ಈಡೇರಿಸದಿದ್ದರೇ ಸಮಾಜದವರು ಹೋರಾಟಕ್ಕೆ ಬೆಂಗಳೂರಿಗೆ ಬರಬೇಕು’ ಎಂದು ಕರೆ ನೀಡಿದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವ ತನಕ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಿರಂತರವಾಗಿರುತ್ತದೆ’ ಎಂದು ಹೇಳಿದರು.</p>.<p>ಮುಂದಿನ ಚುನಾವಣೆಯಲ್ಲಿ ಸಮಾಜದವರು ಪಕ್ಷಾತೀತವಾಗಿ ಸಮಾಜದ ಅಭ್ಯರ್ಥಿಯನ್ನೇ ಬೆಂಬಲಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಪಂಚಾಯತ್ ಪ್ರತಿಜ್ಞೆ ತಂಡ ಮತ್ತು ಸ್ವಾಮೀಜಿ ಅವರನ್ನು ಮಹಿಳೆಯರು ಪೂರ್ಣ ಕುಂಭ ಮತ್ತು ಆರತಿ ಬೆಳಗಿ ಸ್ವಾಗತಿಸಿದರು.</p>.<p>ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ. ಎಚ್.ಎಸ್. ಶಿವಶಂಕರ್, ಅಕ್ಷರ ಸೀಡ್ಸ್ ಕಂಪನಿ ಮಾಲೀಕ ಅರಸೀಕೆರೆ ಎನ್. ಕೊಟ್ರೇಶ್, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್ ಚಂದ್ರ, ಮಾಜಿ ಮೇಯರ್ ಅಜಯ್<br />ಕುಮಾರ್, ಜಿಲ್ಲಾ ಅಧ್ಯಕ್ಷ ಭದ್ರವಾಡಿ ಚಂದ್ರಶೇಖರ್, ಮಲ್ಲಿಕಾರ್ಜುನ ಗೌಡ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಪೂಜಾರ, ಅಡವಿಹಳ್ಳಿ ಬಸವರಾಜ್, ಮತ್ತಿಹಳ್ಳಿ ಅಜ್ಜಣ್ಣ, ಎ. ವೀರಣ್ಣ, ಶಂಬಣ್ಣ, ಕೊಟ್ರೇಶಪ್ಪ, ಪ್ರಕಾಶ್ ಪಾಟೀಲ್, ಜಗದೀಶ್, ಶಾರದಮ್ಮ ಕೊಟ್ರೇಶ್ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>