‘ಹತ್ತಿದ ಏಣಿ ಒದೆಯುವುದು ಬಿಜೆಪಿಗೆ ಹೊಸದಲ್ಲ. 2008ರಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಬೆಂಬಲ ಕೊಟ್ಟಿದ್ದ ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ತಂಗಡಗಿ ಅವರಿಗೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಖರೀದಿಸಿ ಆಪರೇಷನ್ ಕಮಲದ ಮೂಲಕ ಅನೈತಿಕ ಸರ್ಕಾರ ಮಾಡಿಕೊಂಡಿದ್ದಾರೆ. ಬಿಜೆಪಿ ನಂಬಿ ಮೋಸ ಹೋಗಬೇಡಿ ಎಂದು ಅನರ್ಹ ಶಾಸಕರಿಗೆ ನಾವು ಮೊದಲೇ ಹೇಳಿದ್ದೆವು. ಈಗ ಅವರಿಗೆ ಜ್ಞಾನೋದಯವಾಗಿದೆ’ ಎಂದು ಹೇಳಿದರು.