ಯುವ ಹವನಿ ಗ್ರೀನ್ ಬ್ರಿಗೇಡ್ ಅಧ್ಯಕ್ಷ ಪವನ್ ರೇವಣಕರ್, ‘ಜನರು, ಪರಿಸರದ ಮೇಲೆ ದುಷ್ಪರಿಣಾಮವಾದರೂ ಪರವಾಗಿಲ್ಲ ಎಂದುಕೊಂಡು ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುವ ಮೂಲಕ ಅನುದಾನವನ್ನು ದುಂದುವೆಚ್ಚ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಗೋಲ್ಮಾಲ್ ನಡೆಯುತ್ತಿದ್ದು, ಜಿಲ್ಲಾಧಿಕಾರಿ, ಸಂಸದರು ಹಾಗೂ ಶಾಸಕರು ಮಧ್ಯ ಪ್ರವೇಶಿಸಿ ಕಾಮಗಾರಿಯನ್ನು ತಡೆಯಬೇಕು’ ಎಂದು ಮನವಿ ಮಾಡಿದರು.