<p><strong>ದಾವಣಗೆರೆ:</strong> ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ‘ರಾಜನಹಳ್ಳಿಯಿಂದ ರಾಜಧಾನಿ’ಗೆ ಹೊರಟ ಬೃಹತ್ ಪಾದಯಾತ್ರೆ ಸೋಮವಾರ ದಾವಣಗೆರೆಯಿಂದ ಹೊರಟಿತು.</p>.<p>ಭಾನುವಾರ ಸಾಯಂಕಾಲ ದಾವಣಗೆರೆಗೆ ಬಂದಿದ್ದ ನಾಯಕ ಸಮಾಜದ ಮುಖಂಡರು ರಾತ್ರಿ ನಾಯಕರ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯ ಹೂಡಿ ಸೋಮವಾರ ಬೆಳಿಗ್ಗೆ ಅನಗೋಡು ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದರು.</p>.<p>ನಾಯಕರ ಹಾಸ್ಟೆಲ್ನಿಂದ ಪಾದಯಾತ್ರೆ ಹೊರಡುವ ವೇಳೆ ಮಹಿಳೆಯರು ಸ್ವಾಗತಿಸಿದರು. ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯದೇವ ವೃತ್ತ, ಗಾಂಧಿವೃತ್ತ ತಲುಪಿ ಪಿ.ಬಿ. ರಸ್ತೆಯ ಮೂಲಕ ಅನಗೋಡಿಗೆ ಪ್ರಯಾಣ ಬೆಳೆಸಿತು.</p>.<p>ಪಾದಯಾತ್ರೆಯ ನೇತೃತ್ವ ವಹಿಸಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಬೆಂಬಲ ಸೂಚಿಸಿದರು.</p>.<p>ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸ್ವಾಮೀಜಿ ಪಾದಯಾತ್ರೆಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರಸನ್ನಾನಂದ ಪುರಿ ಸ್ವಾಮೀಜಿ ಸ್ವಾಮೀಜಿ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಒಂದು ದೊಡ್ಡ ಶಕ್ತಿಯಾಗಿ ರೂಪುಗೊಳ್ಳಲಿ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಶಿವಯೋಗಿಸ್ವಾಮಿ ಮಾತನಾಡಿ, ‘ಸ್ವಾಮೀಜಿಗಳ ಪಾದಯಾತ್ರೆ ಬೆಂಗಳೂರಿಗೆ ಹೋಗುವ ಅನಿವಾರ್ಯ ಸ್ಥಿತಿ ಬರಬಾರದಿತ್ತು. ಸರ್ಕಾರ ಅದಕ್ಕೆ ಅವಕಾಶ ಮಾಡಬಾರದಿತ್ತು. ಸರ್ಕಾರ ಶೀಘ್ರ ಮೀಸಲಾತಿ ನೀಡುವ ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎ. ರವೀಂದ್ರನಾಥ್ ಮಾತನಾಡಿ ‘ಸರ್ಕಾರ ಎಷ್ಟು ಜಿಡ್ಡುಗಟ್ಟಿದೆ ಎಂಬುದು ಇದರಿಂದ ತಿಳಿಯುತ್ತದೆ. ರಾಜಕೀಯದಿಂದಲೇ ಈ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು. ಪಾದಯಾತ್ರೆ ಬೆಂಗಳೂರಿಗೆ ಹೋಗಲು ಸರ್ಕಾರ ಅವಕಾಶ ಮಾಡಿಕೊಡಬಾರದು. ಶೀಘ್ರ ಮೀಸಲಾತಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಲು ಸರ್ಕಾರ ಮೀನಮೇಷ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಇದನ್ನು ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ಸಮಾಜದ ಮುಖಂಡರಾದ ಡಾ. ವೈ.ರಾಮಪ್ಪ ‘ಒಂದು ವೇಳೆ ಜಾತಿ ಜನಗಣತಿ ವರದಿ ಬಹಿರಂಗೊಂಡಿದ್ದರೆ ಪಾದಯಾತ್ರೆ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಚ್. ಓಬಳಪ್ಪ ಮಾತನಾಡಿ, ಇದೇ 25ರಂದು ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ಪ್ರತಿ ತಾಲ್ಲೂಕುಗಳಿಗೆ 100 ಬಸ್ ವ್ಯವಸ್ಥೆ ಮಾಡಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಹೇಳಿದರು.</p>.<p>ಸಮಾಜದ ಮುಖಂಡರಾದ ಎಚ್.ಕೆ. ರಾಮಚಂದ್ರಪ್ಪ, ದಾವಣಗೆರೆ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎಂ.ಬಿ.ಹಾಲಪ್ಪ, ರಘು ದೊಡ್ಮನಿ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ‘ರಾಜನಹಳ್ಳಿಯಿಂದ ರಾಜಧಾನಿ’ಗೆ ಹೊರಟ ಬೃಹತ್ ಪಾದಯಾತ್ರೆ ಸೋಮವಾರ ದಾವಣಗೆರೆಯಿಂದ ಹೊರಟಿತು.</p>.<p>ಭಾನುವಾರ ಸಾಯಂಕಾಲ ದಾವಣಗೆರೆಗೆ ಬಂದಿದ್ದ ನಾಯಕ ಸಮಾಜದ ಮುಖಂಡರು ರಾತ್ರಿ ನಾಯಕರ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯ ಹೂಡಿ ಸೋಮವಾರ ಬೆಳಿಗ್ಗೆ ಅನಗೋಡು ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದರು.</p>.<p>ನಾಯಕರ ಹಾಸ್ಟೆಲ್ನಿಂದ ಪಾದಯಾತ್ರೆ ಹೊರಡುವ ವೇಳೆ ಮಹಿಳೆಯರು ಸ್ವಾಗತಿಸಿದರು. ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯದೇವ ವೃತ್ತ, ಗಾಂಧಿವೃತ್ತ ತಲುಪಿ ಪಿ.ಬಿ. ರಸ್ತೆಯ ಮೂಲಕ ಅನಗೋಡಿಗೆ ಪ್ರಯಾಣ ಬೆಳೆಸಿತು.</p>.<p>ಪಾದಯಾತ್ರೆಯ ನೇತೃತ್ವ ವಹಿಸಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಬೆಂಬಲ ಸೂಚಿಸಿದರು.</p>.<p>ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸ್ವಾಮೀಜಿ ಪಾದಯಾತ್ರೆಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರಸನ್ನಾನಂದ ಪುರಿ ಸ್ವಾಮೀಜಿ ಸ್ವಾಮೀಜಿ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಒಂದು ದೊಡ್ಡ ಶಕ್ತಿಯಾಗಿ ರೂಪುಗೊಳ್ಳಲಿ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಶಿವಯೋಗಿಸ್ವಾಮಿ ಮಾತನಾಡಿ, ‘ಸ್ವಾಮೀಜಿಗಳ ಪಾದಯಾತ್ರೆ ಬೆಂಗಳೂರಿಗೆ ಹೋಗುವ ಅನಿವಾರ್ಯ ಸ್ಥಿತಿ ಬರಬಾರದಿತ್ತು. ಸರ್ಕಾರ ಅದಕ್ಕೆ ಅವಕಾಶ ಮಾಡಬಾರದಿತ್ತು. ಸರ್ಕಾರ ಶೀಘ್ರ ಮೀಸಲಾತಿ ನೀಡುವ ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎ. ರವೀಂದ್ರನಾಥ್ ಮಾತನಾಡಿ ‘ಸರ್ಕಾರ ಎಷ್ಟು ಜಿಡ್ಡುಗಟ್ಟಿದೆ ಎಂಬುದು ಇದರಿಂದ ತಿಳಿಯುತ್ತದೆ. ರಾಜಕೀಯದಿಂದಲೇ ಈ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು. ಪಾದಯಾತ್ರೆ ಬೆಂಗಳೂರಿಗೆ ಹೋಗಲು ಸರ್ಕಾರ ಅವಕಾಶ ಮಾಡಿಕೊಡಬಾರದು. ಶೀಘ್ರ ಮೀಸಲಾತಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಲು ಸರ್ಕಾರ ಮೀನಮೇಷ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಇದನ್ನು ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ಸಮಾಜದ ಮುಖಂಡರಾದ ಡಾ. ವೈ.ರಾಮಪ್ಪ ‘ಒಂದು ವೇಳೆ ಜಾತಿ ಜನಗಣತಿ ವರದಿ ಬಹಿರಂಗೊಂಡಿದ್ದರೆ ಪಾದಯಾತ್ರೆ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಚ್. ಓಬಳಪ್ಪ ಮಾತನಾಡಿ, ಇದೇ 25ರಂದು ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ಪ್ರತಿ ತಾಲ್ಲೂಕುಗಳಿಗೆ 100 ಬಸ್ ವ್ಯವಸ್ಥೆ ಮಾಡಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಹೇಳಿದರು.</p>.<p>ಸಮಾಜದ ಮುಖಂಡರಾದ ಎಚ್.ಕೆ. ರಾಮಚಂದ್ರಪ್ಪ, ದಾವಣಗೆರೆ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎಂ.ಬಿ.ಹಾಲಪ್ಪ, ರಘು ದೊಡ್ಮನಿ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>