ಸಿಎಲ್– 7 ಬಾರ್ಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಅಧಿಕಾರಿಗಳು ₹ 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಸೆಪ್ಟೆಂಬರ್ 13ರಂದು ಲೋಕಾಯುಕ್ತಕ್ಕೆ ದೂರು ನೀಡಿ, ಸೆ. 14ರಂದು ಮುಂಗಡವಾಗಿ ₹ 3 ಲಕ್ಷ ಲಂಚ ನೀಡುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ, ಆರ್.ಎಸ್. ಸ್ವಪ್ನಾ, ಶೀಲಾ, ಅಶೋಕ್, ಶೈಲಶ್ರೀ ಅವರನ್ನು ಬಂಧಿಸಿದ್ದರು. ಮತ್ತೊಬ್ಬ ಆರೋಪಿ, ಇಲಾಖೆಯ ಡೆಪ್ಯುಟಿ ಸೂಪರಿಂಟೆಂಡೆಂಟ್ ರವಿಕುಮಾರ್ ಮರಿಗೌಡರ್ ತಲೆಮರೆಸಿಕೊಂಡಿದ್ದರು. ನಂತರ ಎಲ್ಲರೂ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.