ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೋನ್ ಕದ್ದಾಲಿಕೆ ಸಂಬಂಧ ಕಾಂಗ್ರೆಸ್, ಜೆಡಿಎಸ್, ಬಿಜೆಪಿಯವರು ಒಂದೊಂದು ರೀತಿ ಹೇಳುತ್ತಿದ್ದಾರೆ. ಅವರವರಿಗೆ ತೋಚಿದಂತೆ ವ್ಯಾಖ್ಯಾನ ಮಾಡುತ್ತಿದ್ದಾರೆ. ಇದರಲ್ಲಿ ಹೊಸದು ಇದೆ ಎಂದೇನೂ ನನಗೆ ಅನಿಸುವುದಿಲ್ಲ. ಅದನ್ನು ಇಲ್ಲಿಗೆ ಬಿಡುವುದು ಒಳಿತು. ಈ ಬಗ್ಗೆ ತನಿಖೆಯೂ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.