ಈ ಬಗ್ಗೆ ಪ್ರತಿಕ್ರಿಯಿಸಿದ ಕಡದಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಅರುಣ್, ‘ನಿವಾಸಿಗಳು ತಮ್ಮ ಮನೆಯ ಕಸವನ್ನು ನದಿ ಸಮೀಪಕ್ಕೆ ತಂದು ಹಾಕಿದ್ದು, ಕಸದಲ್ಲಿ ವಿಷ ಬೆರೆಸಿರುವ ಅನುಮಾನವಿದೆ. ಇದರಿಂದ ಹಂದಿಗಳು ಸತ್ತಿರಬಹುದು.ಸತ್ತ ಕೆಲ ಹಂದಿಗಳನ್ನು ಹೊರಕ್ಕೆ ಸಾಗಿಸಲಾಗಿದೆ. ಬೀದಿಯಲ್ಲಿನ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಸ್ಯಾನಿಟೈಸ್ ಕೂಡ ಮಾಡಲಾಗಿದೆ. ನಿವಾಸಿಗಳು ಆತಂಕ ಪಡುವ ಅಗತ್ಯವಿಲ್ಲ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.