ದ್ವಿದಳ ಧಾನ್ಯಗಳಾದ ತೊಗರಿ, ಅಲಸಂದೆ, ಸೋಯಾಬಿನ್ ಮುಂತಾದ ಬೆಳೆಗಳನ್ನು ಮಿಶ್ರ ಬೆಳೆಗಳನ್ನಾಗಿ ಬೆಳೆದರೆ ಭೂಮಿಯ ಫಲವತ್ತತೆ ಹೆಚ್ಚುವುದಲ್ಲದೇ ರೈತರಿಗೆ ಪೌಷ್ಠಿಕ ಆಹಾರವೂ ಸಿಗುತ್ತದೆ. ರಸಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ಕೊರತೆ ಬಾರದಂತೆ ಎಚ್ಚರಿಕೆ ವಹಿಸಲಾಗಿದೆ. ರೈತರು ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಎನ್ಪಿಕೆ ಕಾಂಪ್ಲೆಕ್ಸ್ ರಸಗೊಬ್ಬರ ಬಳಸುವುದರಿಂದ ಬೆಳೆಗಳಿಗೆ ನೇರವಾಗಿ ಪೊಟ್ಯಾಶ್ ದೊರೆಯುತ್ತದೆ. ಇದರಿಂದ ಬೆಳೆಗಳ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.