ಅ.3ರಂದು ನಡೆದ ಸಭೆಯಲ್ಲಿ ದೀರ್ಘವಾಗಿ ಈ ಬಗ್ಗೆ ಚರ್ಚಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇವೆ ನೀಡುವಲ್ಲಿ ಅಸಡ್ಡೆತನ ತೋರಿರುವುದು ಕಂಡು ಬಂದಿದೆ. ಅ.5ರಂದು ಕರ್ತವ್ಯಕ್ಕೆ ಹಾಜರಾಗದವರನ್ನು ಕರ್ತವ್ಯದಿಂದ ವಜಾಗೊಳಿಸಲಾಗುವುದು. ಬದಲಿ ನೌಕರರನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದು ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.