<p>ಜಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಪ್ರತಿಭಟನಾರ್ಥವಾಗಿ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿಯು ಪಟ್ಟಣದಲ್ಲಿ ನಿರುದ್ಯೋಗಿ ದಿನವಾಗಿ ಗುರುವಾರ ಆಚರಿಸಿತು.</p>.<p>ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರತಿವರ್ಷ 2 ಕೋಟಿ ಉದ್ಯೋಗ ನಿಡುವುದಾಗಿ ಯುವಕರಿಗೆ ಭರವಸೆ ನೀಡಿದ್ದರು. ಆದರೆ, ಇಂದಿಗೂ ಭರವಸೆಯನ್ನು ಈಡೇರಿಸದೆ ಯುವಸಮೂಹವನ್ನು ವಂಚಿಸಿದ್ದಾರೆ. ಮೋದಿ ಅವರನ್ನು ಆರಾಧಿಸುವ ಯುವ ಸಮೂಹ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದರು.</p>.<p>ಕೇಂದ್ರ ಬಿಜೆಪಿ ಸರ್ಕಾರದ ಯುವಜನ ವಿರೋಧಿ ನೀತಿಯನ್ನು ಖಂಡಿಸಿ ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಲಾಯಿತು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕೆಂಚೋಳ್, ಮುಖಂಡರಾದ ಸಿ. ತಿಪ್ಪೇಸ್ವಾಮಿ, ಬಿ. ಲೊಕೇಶ್, ರೇವಣ್ಣ, ರಮೇಶ್ ಗೊಲ್ಲರಹಟ್ಟಿ, ಬೊಮ್ಮಲಿಂಗಪ್ಪ, ಗೋಣೆಪ್ಪ, ಸುರೇಶ್ ನಾಯ್ಕ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಪ್ರತಿಭಟನಾರ್ಥವಾಗಿ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿಯು ಪಟ್ಟಣದಲ್ಲಿ ನಿರುದ್ಯೋಗಿ ದಿನವಾಗಿ ಗುರುವಾರ ಆಚರಿಸಿತು.</p>.<p>ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರತಿವರ್ಷ 2 ಕೋಟಿ ಉದ್ಯೋಗ ನಿಡುವುದಾಗಿ ಯುವಕರಿಗೆ ಭರವಸೆ ನೀಡಿದ್ದರು. ಆದರೆ, ಇಂದಿಗೂ ಭರವಸೆಯನ್ನು ಈಡೇರಿಸದೆ ಯುವಸಮೂಹವನ್ನು ವಂಚಿಸಿದ್ದಾರೆ. ಮೋದಿ ಅವರನ್ನು ಆರಾಧಿಸುವ ಯುವ ಸಮೂಹ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದರು.</p>.<p>ಕೇಂದ್ರ ಬಿಜೆಪಿ ಸರ್ಕಾರದ ಯುವಜನ ವಿರೋಧಿ ನೀತಿಯನ್ನು ಖಂಡಿಸಿ ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಲಾಯಿತು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕೆಂಚೋಳ್, ಮುಖಂಡರಾದ ಸಿ. ತಿಪ್ಪೇಸ್ವಾಮಿ, ಬಿ. ಲೊಕೇಶ್, ರೇವಣ್ಣ, ರಮೇಶ್ ಗೊಲ್ಲರಹಟ್ಟಿ, ಬೊಮ್ಮಲಿಂಗಪ್ಪ, ಗೋಣೆಪ್ಪ, ಸುರೇಶ್ ನಾಯ್ಕ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>