ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಟಿ.ಎಸ್. ನಿಂಗರಾಜು ಅವರ ಪುತ್ರಿಯ ನಿಶ್ಚಿತಾರ್ಥ ನಡೆಯುತ್ತಿತ್ತು. ಆ ವೇಳೆ ಮೂರನೇ ಪಂಕ್ತಿಯಲ್ಲಿ ಆಹಾರ ಸೇವಿಸಿದವರಿಗೆ ಶನಿವಾರ ಬೆಳಿಗ್ಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೆಲವರಿಗೆ ಹದಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ 20 ಮಂದಿಯನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಇವರ ಪೈಕಿ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣ ವೈದ್ಯಾಧಿಕಾರಿ ಡಾ.ಯತೀಶ್ ತಿಳಿಸಿದ್ದಾರೆ.