<p><strong>ನ್ಯಾಮತಿ:</strong> ತಾಲ್ಲೂಕಿನ ಭಾಯಾಗಡ್ನಲ್ಲಿ ನಡೆದ ಸಂತ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ, ಘೋಷಣೆ ಕೂಗಿದವರ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸೂರಗೊಂಡನಕೊಪ್ಪದಲ್ಲಿ ಫೆ.14ರಂದು ನಡೆದ ಕಾರ್ಯಕ್ರಮದಲ್ಲಿ ಕೆಲ ಯುವಕರು ಕಪ್ಪುಬಟ್ಟೆ ಪ್ರದರ್ಶಿಸಿ ಉಪಮುಖ್ಯಮಂತ್ರಿ ವಿರುದ್ಧ ‘ಗೋ ಬ್ಯಾಕ್’ ಘೋಷಣೆ ಕೂಗಿದ್ದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಇದರಿಂದ ಸಮಾರಂಭದಲ್ಲಿ ಗೊಂದಲ, ಆತಂಕ ಸೃಷ್ಟಿಯಾಗಿತ್ತು. ಆಕ್ರೋಶಭರಿತ ಯುವಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿ ಪೊಲೀಸರು ವಿಫಲರಾಗಿದ್ದರು. ಕಪ್ಪುಬಟ್ಟೆ ಪ್ರದರ್ಶಿಸಿ, ಘೋಷಣೆ ಕೂಗಿದ 25ರಿಂದ 30 ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p> <h2>ಪ್ರಕರಣ ಹಿಂಪಡೆಯಲು ಆಗ್ರಹ</h2><p>ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪುಬಟ್ಟೆ ಪ್ರದರ್ಶನ ಮಾಡಿದ ಯುವಕರ ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಕರ್ನಾಟಕ ತಾಂಡ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಯ್ಕ ಆಗ್ರಹಿಸಿದರು.</p><p>‘ಒಳಮೀಸಲಾತಿಗೆ ಸಂಬಂಧಿಸಿದಂತೆ ಸಮುದಾಯದಲ್ಲಿ ಆಕ್ರೋಶ ಮಡುಗಟ್ಟಿದೆ. ಉಪಮುಖ್ಯಮಂತ್ರಿ ವೇದಿಕೆಗೆ ಆಗಮಿಸಿದಾಗ ಅದು ಸ್ವಾಭಾವಿಕವಾಗಿ ಸ್ಫೋಟಗೊಂಡಿತು. ಇದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಮಾಲಾಧಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಖಂಡನೀಯ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಕಪ್ಪುಬಟ್ಟೆ ಪ್ರದರ್ಶನ ಮಾಡಿರುವುದನ್ನು ಮಹಾ ಅಪರಾಧ ಎಂಬಂತೆ ಪೊಲೀಸರು ಬಿಂಬಿಸುತ್ತಿದ್ದಾರೆ. ಕಠಿಣ ಸೆಕ್ಷನ್ಗಳನ್ನು ಹಾಕಿ ಕಿರುಕುಳ ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಂಜಾರ ಸಮುದಾಯದ ಯುವಕರು ಬಂಧನ ಭೀತಿ ಎದುರಿಸುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.</p><p>ಬಂಜಾರ ಹೋರಾಟ ಸಮಿತಿಯ ಮುಖಂಡರಾದ ಕೆ. ತಾರೇಶ್, ಕುಮಾರ ನಾಯ್ಕ, ಈಶ್ವರ ನಾಯ್ಕ ಇದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ತಾಲ್ಲೂಕಿನ ಭಾಯಾಗಡ್ನಲ್ಲಿ ನಡೆದ ಸಂತ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ, ಘೋಷಣೆ ಕೂಗಿದವರ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸೂರಗೊಂಡನಕೊಪ್ಪದಲ್ಲಿ ಫೆ.14ರಂದು ನಡೆದ ಕಾರ್ಯಕ್ರಮದಲ್ಲಿ ಕೆಲ ಯುವಕರು ಕಪ್ಪುಬಟ್ಟೆ ಪ್ರದರ್ಶಿಸಿ ಉಪಮುಖ್ಯಮಂತ್ರಿ ವಿರುದ್ಧ ‘ಗೋ ಬ್ಯಾಕ್’ ಘೋಷಣೆ ಕೂಗಿದ್ದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಇದರಿಂದ ಸಮಾರಂಭದಲ್ಲಿ ಗೊಂದಲ, ಆತಂಕ ಸೃಷ್ಟಿಯಾಗಿತ್ತು. ಆಕ್ರೋಶಭರಿತ ಯುವಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿ ಪೊಲೀಸರು ವಿಫಲರಾಗಿದ್ದರು. ಕಪ್ಪುಬಟ್ಟೆ ಪ್ರದರ್ಶಿಸಿ, ಘೋಷಣೆ ಕೂಗಿದ 25ರಿಂದ 30 ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p> <h2>ಪ್ರಕರಣ ಹಿಂಪಡೆಯಲು ಆಗ್ರಹ</h2><p>ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪುಬಟ್ಟೆ ಪ್ರದರ್ಶನ ಮಾಡಿದ ಯುವಕರ ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಕರ್ನಾಟಕ ತಾಂಡ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಯ್ಕ ಆಗ್ರಹಿಸಿದರು.</p><p>‘ಒಳಮೀಸಲಾತಿಗೆ ಸಂಬಂಧಿಸಿದಂತೆ ಸಮುದಾಯದಲ್ಲಿ ಆಕ್ರೋಶ ಮಡುಗಟ್ಟಿದೆ. ಉಪಮುಖ್ಯಮಂತ್ರಿ ವೇದಿಕೆಗೆ ಆಗಮಿಸಿದಾಗ ಅದು ಸ್ವಾಭಾವಿಕವಾಗಿ ಸ್ಫೋಟಗೊಂಡಿತು. ಇದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಮಾಲಾಧಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಖಂಡನೀಯ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಕಪ್ಪುಬಟ್ಟೆ ಪ್ರದರ್ಶನ ಮಾಡಿರುವುದನ್ನು ಮಹಾ ಅಪರಾಧ ಎಂಬಂತೆ ಪೊಲೀಸರು ಬಿಂಬಿಸುತ್ತಿದ್ದಾರೆ. ಕಠಿಣ ಸೆಕ್ಷನ್ಗಳನ್ನು ಹಾಕಿ ಕಿರುಕುಳ ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಂಜಾರ ಸಮುದಾಯದ ಯುವಕರು ಬಂಧನ ಭೀತಿ ಎದುರಿಸುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.</p><p>ಬಂಜಾರ ಹೋರಾಟ ಸಮಿತಿಯ ಮುಖಂಡರಾದ ಕೆ. ತಾರೇಶ್, ಕುಮಾರ ನಾಯ್ಕ, ಈಶ್ವರ ನಾಯ್ಕ ಇದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>