<p><strong>ದಾವಣಗೆರೆ: </strong>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಹೊಸ ಕುಂದವಾಡ ಸಮೀಪ ಹೋಟೆಲ್ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿದ್ದು, ಸವಾರರೊಬ್ಬರಿಗೆ ಗಾಯಗಳಾಗಿವೆ.</p>.<p>ಹೊಸ ಕುಂದವಾಡ ನಿವಾಸಿ ಎಲ್ಐಸಿ ಏಜೆಂಟ್ ರಮೇಶ (55) ಗಾಯಗೊಂಡವರು.</p>.<p>‘ಅಪಘಾತವಾದ ಮೇಲೆ ಕಾರಿನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಅವರು ಓಡಿಹೋಗಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಗೊಂಡ ರಮೇಶ ಅವರನ್ನು 112 ತುರ್ತು ಸ್ಪಂದನ ವಾಹನದಲ್ಲಿ ಚಿಕಿತ್ಸೆಗಾಗಿ ಸಿ.ಜಿ. ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.</p>.<p>‘ಅಪಘಾತವಾದ ಕಾರಿನಲ್ಲಿ ಪೊಲೀಸ್ ಎಂಬ ಸ್ಟಿಕ್ಕರ್ ಅಂಟಿಸಿದ್ದು, ಪೊಲೀಸರೇ ಅಪಘಾತ ಮಾಡಿದ್ದಾರೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದರು.</p>.<p>‘ವಾಹನ ಖಾಸಗಿಯದಾಗಿದ್ದು, ಪೊಲೀಸ್ ಸ್ಟಿಕ್ಕರ್ ಅಂಟಿಸಲಾಗಿದೆ. ಸಿಆರ್ಪಿಎಫ್ನವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದ್ದು, ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಹೊಸ ಕುಂದವಾಡ ಸಮೀಪ ಹೋಟೆಲ್ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿದ್ದು, ಸವಾರರೊಬ್ಬರಿಗೆ ಗಾಯಗಳಾಗಿವೆ.</p>.<p>ಹೊಸ ಕುಂದವಾಡ ನಿವಾಸಿ ಎಲ್ಐಸಿ ಏಜೆಂಟ್ ರಮೇಶ (55) ಗಾಯಗೊಂಡವರು.</p>.<p>‘ಅಪಘಾತವಾದ ಮೇಲೆ ಕಾರಿನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಅವರು ಓಡಿಹೋಗಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಗೊಂಡ ರಮೇಶ ಅವರನ್ನು 112 ತುರ್ತು ಸ್ಪಂದನ ವಾಹನದಲ್ಲಿ ಚಿಕಿತ್ಸೆಗಾಗಿ ಸಿ.ಜಿ. ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.</p>.<p>‘ಅಪಘಾತವಾದ ಕಾರಿನಲ್ಲಿ ಪೊಲೀಸ್ ಎಂಬ ಸ್ಟಿಕ್ಕರ್ ಅಂಟಿಸಿದ್ದು, ಪೊಲೀಸರೇ ಅಪಘಾತ ಮಾಡಿದ್ದಾರೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದರು.</p>.<p>‘ವಾಹನ ಖಾಸಗಿಯದಾಗಿದ್ದು, ಪೊಲೀಸ್ ಸ್ಟಿಕ್ಕರ್ ಅಂಟಿಸಲಾಗಿದೆ. ಸಿಆರ್ಪಿಎಫ್ನವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದ್ದು, ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>