<p><strong>ಚನ್ನಗಿರಿ</strong>: ‘ಸರಳ, ಸೌಜನ್ಯ, ವಿನಯತೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತವಾಗಿದ್ದು, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮನವಿ ಮಾಡಿದರು. </p>.<p>ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಡಾ. ಮಲ್ಲಿಕಾರ್ಜುನ್ ಅವರ ಪರ ನಡೆದ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ರಾಜ್ಯದ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ವಹಿಸಿಕೊಂಡ ಎರಡು ತಿಂಗಳಲ್ಲಿ ಈಡೇರಿಸುವ ಮೂಲಕ ಜನರ ಒಲವು ಗಳಿಸಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಪ್ರಭಾ ಅವರು ಗೆಲವು ಸಾಧಿಸಿ ಪ್ರಥಮ ಬಾರಿಗೆ ಸಂಸದರಾಗಲಿದ್ದಾರೆ’ ಎಂದರು.</p>.<p>ಶಾಸಕ ಬಸವರಾಜು ವಿ. ಶಿವಗಂಗಾ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಮೂಲಸೌಕರ್ಯ, ನಗರಗಳ ಸಾಮರ್ಥ್ಯವರ್ಧನೆ ಹಾಗೂ ಸಾಮಾಜಿಕ ಸೇವೆಗಳ ನಡುವಿನ ಅಂತರ ನಿವಾರಣೆಗಾಗಿ ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ ಜಾರಿಗೊಳಿಸಲಿದೆ’ ಎಂದರು. </p>.<p>ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ‘ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಕನಸನ್ನು ಹೊಂದಿದ್ದೇನೆ. ಈ ಕನಸು ನನಸಾಗಲು ನನಗೆ ಹೆಚ್ಚಿನ ಮತಗಳನ್ನು ಹಾಕುವ ಮೂಲಕ ಗೆಲ್ಲಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. </p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ಸಿ. ನಾಗರಾಜ್, ಅಮಾನುಲ್ಲಾ, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಬಿ.ಆರ್. ಹಾಲೇಶ್, ಎಂ. ಯೋಗೇಶ್, ವಡ್ನಾಳ್ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಸರಳ, ಸೌಜನ್ಯ, ವಿನಯತೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತವಾಗಿದ್ದು, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮನವಿ ಮಾಡಿದರು. </p>.<p>ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಡಾ. ಮಲ್ಲಿಕಾರ್ಜುನ್ ಅವರ ಪರ ನಡೆದ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ರಾಜ್ಯದ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ವಹಿಸಿಕೊಂಡ ಎರಡು ತಿಂಗಳಲ್ಲಿ ಈಡೇರಿಸುವ ಮೂಲಕ ಜನರ ಒಲವು ಗಳಿಸಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಪ್ರಭಾ ಅವರು ಗೆಲವು ಸಾಧಿಸಿ ಪ್ರಥಮ ಬಾರಿಗೆ ಸಂಸದರಾಗಲಿದ್ದಾರೆ’ ಎಂದರು.</p>.<p>ಶಾಸಕ ಬಸವರಾಜು ವಿ. ಶಿವಗಂಗಾ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಮೂಲಸೌಕರ್ಯ, ನಗರಗಳ ಸಾಮರ್ಥ್ಯವರ್ಧನೆ ಹಾಗೂ ಸಾಮಾಜಿಕ ಸೇವೆಗಳ ನಡುವಿನ ಅಂತರ ನಿವಾರಣೆಗಾಗಿ ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ ಜಾರಿಗೊಳಿಸಲಿದೆ’ ಎಂದರು. </p>.<p>ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ‘ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಕನಸನ್ನು ಹೊಂದಿದ್ದೇನೆ. ಈ ಕನಸು ನನಸಾಗಲು ನನಗೆ ಹೆಚ್ಚಿನ ಮತಗಳನ್ನು ಹಾಕುವ ಮೂಲಕ ಗೆಲ್ಲಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. </p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ಸಿ. ನಾಗರಾಜ್, ಅಮಾನುಲ್ಲಾ, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಬಿ.ಆರ್. ಹಾಲೇಶ್, ಎಂ. ಯೋಗೇಶ್, ವಡ್ನಾಳ್ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>