<p><strong>ದಾವಣಗೆರೆ:</strong> ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಗೀತೆಯಾಗಿದ್ದ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನಗಣಮನ’ಕ್ಕೆ ಇರುವಷ್ಟೇ ಗೌರವ ಸಿಗಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p><p>‘ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ಅಧಿವೇಶನಗಳಲ್ಲಿ ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಹಾಡಲಾಗುತ್ತಿತ್ತು. ದುರ್ಗೆ ಮತ್ತು ಸರಸ್ವತಿಯ ಆರಾಧನೆ, ಮೂರ್ತಿ ಪೂಜೆಯ ವರ್ಣನೆ ಇದೆ ಎಂಬ ಕಾರಣ ನೀಡಿ ಆ ಬಳಿಕ ವಿರೋಧಿಸಲಾಯಿತು. ಮುಸ್ಲಿಂ ಓಲೈಕೆಗಾಗಿ ಗೀತೆಯನ್ನು ತುಂಡರಿಸಲಾಯಿತು’ ಎಂದು ಬುಧವಾರ ಸುದ್ದಿಗಾರರ ಬಳಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಒಂದೂವರೆ ಕೋಟಿ ಹಿಂದೂಗಳು ಬಾಂಗ್ಲಾದಲ್ಲಿ ಅಸಹಾಯಕರಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕಠಿಣ ಎಚ್ಚರಿಕೆ ನೀಡಿಲ್ಲ. ಕೇಂದ್ರ ಸರ್ಕಾರದ ಈ ಮೌನ ಸರಿಯಲ್ಲ’ ಎಂದರು.</p><p>‘ರಾಜ್ಯದಲ್ಲಿ 15 ಲಕ್ಷಕ್ಕೂ ಅಧಿಕ ಬಾಂಗ್ಲಾ ವಲಸಿಗರಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಕ್ಷೇತ್ರವೊಂದರಲ್ಲೇ 25 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮುಸ್ಲಿಮರಿದ್ದಾರೆ ಎಂಬ ಆರೋಪಗಳಿವೆ. ಇವರನ್ನು ದೇಶದಿಂದ ಹೊರಹಾಕದಿದ್ದರೆ ಕಾಲೊನಿಗಳಿಗೆ ನುಗ್ಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><blockquote>ಕಾಂಗ್ರೆಸ್ ನಾಯಕರಿಗೆ ಅಧಿಕಾರ ಕೊಟ್ಟಿರುವುದು ಜನಸೇವೆಗೆ ಹೊರತು ಪೊಲೀಸರ ಮೇಲೆ ಹಲ್ಲೆ ನಡೆಸಲು ಅಲ್ಲ. ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ </blockquote><span class="attribution">ಪ್ರಮೋದ್ ಮುತಾಲಿಕ್, ಸಂಸ್ಥಾಪಕ, ಶ್ರೀರಾಮ ಸೇನೆ</span></div>.<h3><strong>‘ಜಾತ್ರೆಯಲ್ಲಿ ‘ಹಲಾಲ್’ ಬೇಡ’</strong></h3><p>‘ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಹಿಂದೂ ಸಂಪ್ರದಾಯವನ್ನೇ ಪಾಲಿಸಬೇಕು. ದೇವಿಗೆ ಪ್ರಾಣಿಬಲಿ ನೀಡುವಾಗ ಮುಸ್ಲಿಂ ಪದ್ಧತಿಯಾದ ಹಲಾಲ್ ಮಾಡಿಸುವುದು ಧರ್ಮವಿರೋಧಿ’ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.</p><p>‘ಭಕ್ತರು ಹಿಂದೂ ಸಂಪ್ರದಾಯದ ಪ್ರಕಾರವೇ ಪ್ರಾಣಿ ಬಲಿ ನೀಡಬೇಕು. ಮುಸ್ಲಿಮರಿಂದ ಹಲಾಲ್ ಮಾಡಿಸಿದರೆ ಅಥವಾ ಮುಸ್ಲಿಂ ಪದ್ಧತಿಯಂತೆ ಹಲಾಲ್ ಮಾಡಿದರೆ ದೇವಿಯ ಶಾಪ ತಟ್ಟಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಗೀತೆಯಾಗಿದ್ದ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನಗಣಮನ’ಕ್ಕೆ ಇರುವಷ್ಟೇ ಗೌರವ ಸಿಗಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p><p>‘ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ಅಧಿವೇಶನಗಳಲ್ಲಿ ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಹಾಡಲಾಗುತ್ತಿತ್ತು. ದುರ್ಗೆ ಮತ್ತು ಸರಸ್ವತಿಯ ಆರಾಧನೆ, ಮೂರ್ತಿ ಪೂಜೆಯ ವರ್ಣನೆ ಇದೆ ಎಂಬ ಕಾರಣ ನೀಡಿ ಆ ಬಳಿಕ ವಿರೋಧಿಸಲಾಯಿತು. ಮುಸ್ಲಿಂ ಓಲೈಕೆಗಾಗಿ ಗೀತೆಯನ್ನು ತುಂಡರಿಸಲಾಯಿತು’ ಎಂದು ಬುಧವಾರ ಸುದ್ದಿಗಾರರ ಬಳಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಒಂದೂವರೆ ಕೋಟಿ ಹಿಂದೂಗಳು ಬಾಂಗ್ಲಾದಲ್ಲಿ ಅಸಹಾಯಕರಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕಠಿಣ ಎಚ್ಚರಿಕೆ ನೀಡಿಲ್ಲ. ಕೇಂದ್ರ ಸರ್ಕಾರದ ಈ ಮೌನ ಸರಿಯಲ್ಲ’ ಎಂದರು.</p><p>‘ರಾಜ್ಯದಲ್ಲಿ 15 ಲಕ್ಷಕ್ಕೂ ಅಧಿಕ ಬಾಂಗ್ಲಾ ವಲಸಿಗರಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಕ್ಷೇತ್ರವೊಂದರಲ್ಲೇ 25 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮುಸ್ಲಿಮರಿದ್ದಾರೆ ಎಂಬ ಆರೋಪಗಳಿವೆ. ಇವರನ್ನು ದೇಶದಿಂದ ಹೊರಹಾಕದಿದ್ದರೆ ಕಾಲೊನಿಗಳಿಗೆ ನುಗ್ಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><blockquote>ಕಾಂಗ್ರೆಸ್ ನಾಯಕರಿಗೆ ಅಧಿಕಾರ ಕೊಟ್ಟಿರುವುದು ಜನಸೇವೆಗೆ ಹೊರತು ಪೊಲೀಸರ ಮೇಲೆ ಹಲ್ಲೆ ನಡೆಸಲು ಅಲ್ಲ. ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ </blockquote><span class="attribution">ಪ್ರಮೋದ್ ಮುತಾಲಿಕ್, ಸಂಸ್ಥಾಪಕ, ಶ್ರೀರಾಮ ಸೇನೆ</span></div>.<h3><strong>‘ಜಾತ್ರೆಯಲ್ಲಿ ‘ಹಲಾಲ್’ ಬೇಡ’</strong></h3><p>‘ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಹಿಂದೂ ಸಂಪ್ರದಾಯವನ್ನೇ ಪಾಲಿಸಬೇಕು. ದೇವಿಗೆ ಪ್ರಾಣಿಬಲಿ ನೀಡುವಾಗ ಮುಸ್ಲಿಂ ಪದ್ಧತಿಯಾದ ಹಲಾಲ್ ಮಾಡಿಸುವುದು ಧರ್ಮವಿರೋಧಿ’ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.</p><p>‘ಭಕ್ತರು ಹಿಂದೂ ಸಂಪ್ರದಾಯದ ಪ್ರಕಾರವೇ ಪ್ರಾಣಿ ಬಲಿ ನೀಡಬೇಕು. ಮುಸ್ಲಿಮರಿಂದ ಹಲಾಲ್ ಮಾಡಿಸಿದರೆ ಅಥವಾ ಮುಸ್ಲಿಂ ಪದ್ಧತಿಯಂತೆ ಹಲಾಲ್ ಮಾಡಿದರೆ ದೇವಿಯ ಶಾಪ ತಟ್ಟಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>