‘ನಮ್ಮ ಹೋಟೆಲ್ ಬಗ್ಗೆ ಅವರು ಮಾತನಾಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಬೇಕು ಎಂದಿದ್ದೆ. ಆದರೆ, ಅವರು ಟ್ರೋಲ್ ಆದ ಮೇಲೆ ಆ ನಿರ್ಧಾರ ಕೈಬಿಟ್ಟೆ. ಜುಲೈ 8ರಂದು ಕೊಠಡಿ ಖಾಲಿ ಮಾಡಿದ ಬಳಿಕ ಅವರ ಬಗ್ಗೆ ಟೀಕೆಗಳು ಬಂದವು. ಕೆಲಸದ ನಿಮಿತ್ತ ವಾಸ್ತವ್ಯ ಹೂಡುತ್ತಿದ್ದೇನೆಯೇ ಹೊರತು, ಕ್ವಾರಂಟೈನ್ಗಾಗಿ ಅಲ್ಲ ಎಂದಿದ್ದರು. ನಮ್ಮ ಹೋಟೆಲ್ಗೆ ಅವರು ಈ ಮೊದಲೂ ಒಂದು ಬಾರಿ ಬಂದಿದ್ದರು’ ಎಂದು ವಿನಾಯಕ ಹೇಳಿದರು.