<p><strong>ಹರಿಹರ</strong>: ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪರ ಅವರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಮಹಾಸಭಾದ ಹರಿಹರ ತಾಲ್ಲೂಕು ಘಟಕದಿಂದ ಸೋಮವಾರ ನಗರದ ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಉದ್ಯಮಿಯಾಗಿ, ಮುಖಂಡರಾಗಿ, ಜನಪ್ರತಿನಿಧಿಯಾಗಿ ಶಿವಶಂಕರಪ್ಪನವರು ಮಾಡುತ್ತಿರುವ ಜನಸೇವೆ ಅನನ್ಯವಾದುದು. ದಾವಣಗೆರೆಯನ್ನು ಶಿಕ್ಷಣ ಕಾಶಿಯಾಗಿ, ಆರೋಗ್ಯ ಸೇವೆಯ ಕ್ಷೇತ್ರವಾಗಿ ಬೆಳೆಸುವಲ್ಲಿ ಇವರ ಪಾತ್ರ ಮಹತ್ವವಾದುದು. ದೇವರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಲಾಯಿತು ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಜಿ.ಶಿವಾನಂದಪ್ಪ ತಿಳಿಸಿದರು.</p>.<p>ಹಿರಿಯರಾದ ಗೌಡರ ಮಹದೇವಪ್ಪ, ಪದಾಧಿಕಾರಿಗಳಾದ ಜಿ.ಕೆ.ಮಲ್ಲಿಕಾರ್ಜುನ್, ವೀರಣ್ಣ ಯಾದವಾಡ, ನಾಗರಾಜ್ ಕುರುವತ್ತಿ, ಅಂಜು ಸುರೇಶ್, ವೀರಯ್ಯ, ಎಚ್.ಎಂ.ರುದ್ರೇಶ್, ಪ್ರವೀಣ್ ಗಜಾಪುರ, ಎಚ್.ಮಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪರ ಅವರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಮಹಾಸಭಾದ ಹರಿಹರ ತಾಲ್ಲೂಕು ಘಟಕದಿಂದ ಸೋಮವಾರ ನಗರದ ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಉದ್ಯಮಿಯಾಗಿ, ಮುಖಂಡರಾಗಿ, ಜನಪ್ರತಿನಿಧಿಯಾಗಿ ಶಿವಶಂಕರಪ್ಪನವರು ಮಾಡುತ್ತಿರುವ ಜನಸೇವೆ ಅನನ್ಯವಾದುದು. ದಾವಣಗೆರೆಯನ್ನು ಶಿಕ್ಷಣ ಕಾಶಿಯಾಗಿ, ಆರೋಗ್ಯ ಸೇವೆಯ ಕ್ಷೇತ್ರವಾಗಿ ಬೆಳೆಸುವಲ್ಲಿ ಇವರ ಪಾತ್ರ ಮಹತ್ವವಾದುದು. ದೇವರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಲಾಯಿತು ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಜಿ.ಶಿವಾನಂದಪ್ಪ ತಿಳಿಸಿದರು.</p>.<p>ಹಿರಿಯರಾದ ಗೌಡರ ಮಹದೇವಪ್ಪ, ಪದಾಧಿಕಾರಿಗಳಾದ ಜಿ.ಕೆ.ಮಲ್ಲಿಕಾರ್ಜುನ್, ವೀರಣ್ಣ ಯಾದವಾಡ, ನಾಗರಾಜ್ ಕುರುವತ್ತಿ, ಅಂಜು ಸುರೇಶ್, ವೀರಯ್ಯ, ಎಚ್.ಎಂ.ರುದ್ರೇಶ್, ಪ್ರವೀಣ್ ಗಜಾಪುರ, ಎಚ್.ಮಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>