ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ನೀಡಿ: ಜಿ.ಎಂ.ಸಿದ್ದೇಶ್ವರ

Last Updated 6 ಡಿಸೆಂಬರ್ 2021, 4:42 IST
ಅಕ್ಷರ ಗಾತ್ರ

ಮಲೇಬೆನ್ನೂರು: ಶಿವಮೊಗ್ಗ– ದಾವಣಗೆರೆ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಆಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ಸಮೀಪದ ಕೋಮಾರನಹಳ್ಳಿ ಗ್ರಾಮದಲ್ಲಿಭಾನುವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಹಿಂದೆ ಬೇರೆ ಭಾಗದಿಂದ ಬಂದು ಆಯ್ಕೆಯಾಗಿದ್ದ ಜನಪ್ರತಿನಿಧಿಗಳು ಚುನಾವಣೆ ನಂತರ ಜನರ ಕೈಗೆ ಸಿಕ್ಕಿರಲಿಲ್ಲ. ಬಿಜೆಪಿ ಕಾರ್ಯಕರ್ತರು ಚುನಾವಣೆ ಮುಗಿಯುವವರೆಗೆ ಯಾವುದೇ ಗೊಂದಲಕ್ಕೆ ಒಳಗಾಗಬೇಡಿ’ ಎಂದು ಕಿವಿಮಾತು ಹೇಳಿದರು.

ಈ ಬಾರಿ ಬಿಜೆಪಿ ಆಭ್ಯರ್ಥಿ ಸ್ಥಳೀಯರಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮದ ಆಧಾರದಲ್ಲಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಆಭ್ಯರ್ಥಿ ಕೆ.ಎಸ್. ನವೀನ್ ಮಾತನಾಡಿದರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಬಿ.ಪಿ. ಹರೀಶ್, ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್, ಬಿ.ಎಂ.ವಾಗೀಶ ಸ್ವಾಮಿ, ಜಿಗಳಿ ಹನುಮಗೌಡ, ಆದಾಪುರ ವೀರೇಶ, ಹಾಲಿವಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗನಾಥ್, ಐರಣಿ ಅಣ್ಣೇಶ್, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು ಇದ್ದರು.

ಬಳಿಕಸಮೀಪದ ಕೊಕ್ಕನೂರು ಗ್ರಾಮದಲ್ಲಿ ಮುಖಂಡರು ಪ್ರಚಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT