ಹೆರಿಗೆಗಾಗಿ ಆರಂಭದಲ್ಲಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಭಾನುವಾರ ತಡರಾತ್ರಿ ಹೆರಿಗೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಕಾವ್ಯ ಅವರಿಗೆ ರಕ್ತಹೀನತೆ ಹಾಗೂ ರಕ್ತದೊತ್ತಡ ಇದ್ದುದರಿಂದ ರಕ್ತ ನೀಡಲಾಯಿತು. ಆನಂತರ ರಕ್ತದೊತ್ತಡ ನಿಯಂತ್ರಣಕ್ಕೆ ಇಂಜಕ್ಷನ್ ನೀಡಲಾಗಿದೆ. ಸಾಮಾನ್ಯ ಹೆರಿಗೆಯಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದರು.