<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ವತಿಯಿಂದ ಏಪ್ರಿಲ್ 5 ಮತ್ತು 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಪಕ್ಷದ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ ತಿಳಿಸಿದರು.</p>.<p>‘ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ನೇತೃತ್ವದ ಈ ಶಿಬಿರದಲ್ಲಿ ಸ್ವ ಅರಿವು ಮತ್ತು ಸ್ವ ವಿಮರ್ಶೆ ಜೊತೆಗೆ ನಾನೇಕೆ ರಾಜಕೀಯ ಮುಂದಾಳತ್ವ ವಹಿಸಬೇಕು’ ಎಂದು ಬಗ್ಗೆ ವಿವರಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ತನ್ನ ಸುತ್ತಮುತ್ತಲಿನ ಸಮಕಾಲೀನ ಸಮಸ್ಯೆಗಳನ್ನು ಮುಖಾಮುಖಿಯಾಗಿ ಎದುರಿಸುವುದು ಹೇಗೆ? ಪ್ರಸ್ತುತ ರಾಜಕೀಯ ಸಮಕಾಲೀನ ಚಿಂತನೆಗಳು, ನಾಯಕತ್ವದ ಗುಣ ಬೆಳೆಸುವುದು, ಭಾಷಣ ಹಾಗೂ ಸಾಮಾಜಿಕ ಜಾಲತಾಣಗಳ ಕೌಶಲದ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು’ ಎಂದರು.</p>.<p>ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೇ, ಸಾರ್ವಜನಿಕರೂ ಶಿಬಿರದಲ್ಲಿ ಭಾಗವಹಿಸಬಹುದು. ಊಟ ಮತ್ತು ವಸತಿ ವ್ಯವಸ್ಥೆ ಇರಲಿದೆ. ಒಬ್ಬರಿಗೆ ₹300 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಹೆಸರನ್ನು ನೋಂದಾಯಿಸಲು 7619353525/ 8749065597 ಕರೆ ಮಾಡಬಹುದು ಎಂದು ತಿಳಿಸಿದರು.</p>.<p>ಮಾರ್ಚ್ 23 ರಂದು ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ 3 ವರ್ಷಗಳ ಕಾಲಾವಧಿಗೆ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.</p>.<p>ನೂತನ ಪದಾಧಿಕಾರಿಗಳಾದ ಕೆ.ಎಸ್.ವೀರಭದ್ರಪ್ಪ, ಪುಟ್ಟನಾಯ್ಕ ಎಲ್., ವಿ.ಬಿ.ಕೃಷ್ಣ, ಮಂಜುನಾಥ್ ಹಳ್ಳಿಕೆರೆ, ಟಿ.ಅಜ್ಜೇಶ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ವತಿಯಿಂದ ಏಪ್ರಿಲ್ 5 ಮತ್ತು 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಪಕ್ಷದ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ ತಿಳಿಸಿದರು.</p>.<p>‘ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ನೇತೃತ್ವದ ಈ ಶಿಬಿರದಲ್ಲಿ ಸ್ವ ಅರಿವು ಮತ್ತು ಸ್ವ ವಿಮರ್ಶೆ ಜೊತೆಗೆ ನಾನೇಕೆ ರಾಜಕೀಯ ಮುಂದಾಳತ್ವ ವಹಿಸಬೇಕು’ ಎಂದು ಬಗ್ಗೆ ವಿವರಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ತನ್ನ ಸುತ್ತಮುತ್ತಲಿನ ಸಮಕಾಲೀನ ಸಮಸ್ಯೆಗಳನ್ನು ಮುಖಾಮುಖಿಯಾಗಿ ಎದುರಿಸುವುದು ಹೇಗೆ? ಪ್ರಸ್ತುತ ರಾಜಕೀಯ ಸಮಕಾಲೀನ ಚಿಂತನೆಗಳು, ನಾಯಕತ್ವದ ಗುಣ ಬೆಳೆಸುವುದು, ಭಾಷಣ ಹಾಗೂ ಸಾಮಾಜಿಕ ಜಾಲತಾಣಗಳ ಕೌಶಲದ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು’ ಎಂದರು.</p>.<p>ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೇ, ಸಾರ್ವಜನಿಕರೂ ಶಿಬಿರದಲ್ಲಿ ಭಾಗವಹಿಸಬಹುದು. ಊಟ ಮತ್ತು ವಸತಿ ವ್ಯವಸ್ಥೆ ಇರಲಿದೆ. ಒಬ್ಬರಿಗೆ ₹300 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಹೆಸರನ್ನು ನೋಂದಾಯಿಸಲು 7619353525/ 8749065597 ಕರೆ ಮಾಡಬಹುದು ಎಂದು ತಿಳಿಸಿದರು.</p>.<p>ಮಾರ್ಚ್ 23 ರಂದು ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ 3 ವರ್ಷಗಳ ಕಾಲಾವಧಿಗೆ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.</p>.<p>ನೂತನ ಪದಾಧಿಕಾರಿಗಳಾದ ಕೆ.ಎಸ್.ವೀರಭದ್ರಪ್ಪ, ಪುಟ್ಟನಾಯ್ಕ ಎಲ್., ವಿ.ಬಿ.ಕೃಷ್ಣ, ಮಂಜುನಾಥ್ ಹಳ್ಳಿಕೆರೆ, ಟಿ.ಅಜ್ಜೇಶ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>