ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಅಧಿಕಾರಿಗಳಿಂದ ಬಾಲ್ಯ ವಿವಾಹಕ್ಕೆ ತಡೆ

Last Updated 24 ಡಿಸೆಂಬರ್ 2020, 3:56 IST
ಅಕ್ಷರ ಗಾತ್ರ

ದಾವಣಗೆರೆ: ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡ ತಡೆದಿದೆ.

ಹರಿಹರದ ಬಾಲಕಿಯನ್ನು ಹದಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಿವಾಸಿ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಡಲು ನಿರ್ಧರಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಾಹಿತಿ ಬಂದಿತ್ತು. ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕ ಟಿ.ಎಂ.ಕೊಟ್ರೇಶ್, ಸಹಾಯವಾಣಿ ಕಾರ್ಯಕರ್ತರಾದ ಡಿ.ಮಂಜುನಾಥ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶೈಲಾ ಎಸ್.ಮೈದೂರು ತಂಡವು ಬಾಲಕಿಯ ಮನೆಗೆ ಭೇಟಿ ನೀಡಿತು.

ದಾಖಲೆ ಪರಿಶೀಲಿಸಿದಾಗ ಬಾಲಕಿಗೆ 16 ವರ್ಷ ನಾಲ್ಕು ತಿಂಗಳು ಎಂಬುದು ಗೊತ್ತಾಯಿತು. ಬಾಲಕಿಯ ತಂದೆ ಮೃತಪಟ್ಟಿದ್ದು, ತಾಯಿಯು ಸಂಬಂಧಿ ಯುವಕನಿಗೇ ಕೊಟ್ಟು ಜವಾಬ್ದಾರಿ ಮುಗಿಸಲು ನಿರ್ಧರಿಸಿರುವುದು ಗೊತ್ತಾಯಿತು. ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, 1 ವರ್ಷಕ್ಕೆ ಕಡಿಮೆ ಇಲ್ಲದಂತೆ ಶಿಕ್ಷೆ ಇರುವುದನ್ನು ತಿಳಿಸಿ, ಕಾನೂನು ಅರಿವು ಮೂಡಿಸಲಾಯಿತು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಅವರ ಸಮ್ಮುಖದಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT