<p><strong>ದಾವಣಗೆರೆ: </strong>ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡ ತಡೆದಿದೆ.</p>.<p>ಹರಿಹರದ ಬಾಲಕಿಯನ್ನು ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಡಲು ನಿರ್ಧರಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಾಹಿತಿ ಬಂದಿತ್ತು. ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕ ಟಿ.ಎಂ.ಕೊಟ್ರೇಶ್, ಸಹಾಯವಾಣಿ ಕಾರ್ಯಕರ್ತರಾದ ಡಿ.ಮಂಜುನಾಥ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶೈಲಾ ಎಸ್.ಮೈದೂರು ತಂಡವು ಬಾಲಕಿಯ ಮನೆಗೆ ಭೇಟಿ ನೀಡಿತು.</p>.<p>ದಾಖಲೆ ಪರಿಶೀಲಿಸಿದಾಗ ಬಾಲಕಿಗೆ 16 ವರ್ಷ ನಾಲ್ಕು ತಿಂಗಳು ಎಂಬುದು ಗೊತ್ತಾಯಿತು. ಬಾಲಕಿಯ ತಂದೆ ಮೃತಪಟ್ಟಿದ್ದು, ತಾಯಿಯು ಸಂಬಂಧಿ ಯುವಕನಿಗೇ ಕೊಟ್ಟು ಜವಾಬ್ದಾರಿ ಮುಗಿಸಲು ನಿರ್ಧರಿಸಿರುವುದು ಗೊತ್ತಾಯಿತು. ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, 1 ವರ್ಷಕ್ಕೆ ಕಡಿಮೆ ಇಲ್ಲದಂತೆ ಶಿಕ್ಷೆ ಇರುವುದನ್ನು ತಿಳಿಸಿ, ಕಾನೂನು ಅರಿವು ಮೂಡಿಸಲಾಯಿತು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಅವರ ಸಮ್ಮುಖದಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡ ತಡೆದಿದೆ.</p>.<p>ಹರಿಹರದ ಬಾಲಕಿಯನ್ನು ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಡಲು ನಿರ್ಧರಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಾಹಿತಿ ಬಂದಿತ್ತು. ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕ ಟಿ.ಎಂ.ಕೊಟ್ರೇಶ್, ಸಹಾಯವಾಣಿ ಕಾರ್ಯಕರ್ತರಾದ ಡಿ.ಮಂಜುನಾಥ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶೈಲಾ ಎಸ್.ಮೈದೂರು ತಂಡವು ಬಾಲಕಿಯ ಮನೆಗೆ ಭೇಟಿ ನೀಡಿತು.</p>.<p>ದಾಖಲೆ ಪರಿಶೀಲಿಸಿದಾಗ ಬಾಲಕಿಗೆ 16 ವರ್ಷ ನಾಲ್ಕು ತಿಂಗಳು ಎಂಬುದು ಗೊತ್ತಾಯಿತು. ಬಾಲಕಿಯ ತಂದೆ ಮೃತಪಟ್ಟಿದ್ದು, ತಾಯಿಯು ಸಂಬಂಧಿ ಯುವಕನಿಗೇ ಕೊಟ್ಟು ಜವಾಬ್ದಾರಿ ಮುಗಿಸಲು ನಿರ್ಧರಿಸಿರುವುದು ಗೊತ್ತಾಯಿತು. ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, 1 ವರ್ಷಕ್ಕೆ ಕಡಿಮೆ ಇಲ್ಲದಂತೆ ಶಿಕ್ಷೆ ಇರುವುದನ್ನು ತಿಳಿಸಿ, ಕಾನೂನು ಅರಿವು ಮೂಡಿಸಲಾಯಿತು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಅವರ ಸಮ್ಮುಖದಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>