<p><strong>ದಾವಣಗೆರೆ</strong>: ‘ವಿಬಿ– ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ನೀಡಿದ್ದ ಜಾಹೀರಾತಿನಲ್ಲಿ ಸತ್ಯದ ಸಂದೇಶವಿದೆ. ಬಿಜೆಪಿ ನೀಡಿದ ಜಾಹೀರಾತು ಅಸತ್ಯದಿಂದ ಕೂಡಿದೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಎಚ್. ಗೋಪಗೊಂಡನ ಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಬಿ– ಜಿ ರಾಮ್ ಜಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ರಾಜ್ಯ ಬಿಜೆಪಿ ಶಾಸಕರಿಗೆ ಸದನದಲ್ಲಿ ಅವಕಾಶ ಇತ್ತು. ಆದರೂ ಅವರು ಸಭಾತ್ಯಾಗ ಮಾಡಿದ್ದು ಯಾಕೆ?’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಆಪರೇಷನ್ ಕಮಲ ಶುರು ಮಾಡಿದ್ದೇ ಬಿಜೆಪಿ. ಬಿಜೆಪಿಯವರ ಪ್ರವೃತ್ತಿ ನಮಗೆ ಬೇಕಾಗಿಲ್ಲ. ವಿಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ. ಆದರೂ, ಅವರು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.</p>.<p>‘ಸಂಸತ್ತಿನಲ್ಲಿ ಪ್ರಧಾನಿ ಮೇಲೆ ಸಂಸದೆಯರಿಂದ ಹಲ್ಲೆಗೆ ಸಂಚು ನಡೆದಿತ್ತು ಎಂದು ಸ್ಪೀಕರ್ ಹೇಳಿದ್ದಾರೆ. ಹಾಗಿದ್ದರೆ ಗೃಹ ಸಚಿವ ಅಮಿತ್ ಶಾ ಎಷ್ಟು ಸಮರ್ಥರೆಂಬ ಪ್ರಶ್ನೆ ಮೂಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ವಿಬಿ– ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ನೀಡಿದ್ದ ಜಾಹೀರಾತಿನಲ್ಲಿ ಸತ್ಯದ ಸಂದೇಶವಿದೆ. ಬಿಜೆಪಿ ನೀಡಿದ ಜಾಹೀರಾತು ಅಸತ್ಯದಿಂದ ಕೂಡಿದೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಎಚ್. ಗೋಪಗೊಂಡನ ಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಬಿ– ಜಿ ರಾಮ್ ಜಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ರಾಜ್ಯ ಬಿಜೆಪಿ ಶಾಸಕರಿಗೆ ಸದನದಲ್ಲಿ ಅವಕಾಶ ಇತ್ತು. ಆದರೂ ಅವರು ಸಭಾತ್ಯಾಗ ಮಾಡಿದ್ದು ಯಾಕೆ?’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಆಪರೇಷನ್ ಕಮಲ ಶುರು ಮಾಡಿದ್ದೇ ಬಿಜೆಪಿ. ಬಿಜೆಪಿಯವರ ಪ್ರವೃತ್ತಿ ನಮಗೆ ಬೇಕಾಗಿಲ್ಲ. ವಿಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ. ಆದರೂ, ಅವರು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.</p>.<p>‘ಸಂಸತ್ತಿನಲ್ಲಿ ಪ್ರಧಾನಿ ಮೇಲೆ ಸಂಸದೆಯರಿಂದ ಹಲ್ಲೆಗೆ ಸಂಚು ನಡೆದಿತ್ತು ಎಂದು ಸ್ಪೀಕರ್ ಹೇಳಿದ್ದಾರೆ. ಹಾಗಿದ್ದರೆ ಗೃಹ ಸಚಿವ ಅಮಿತ್ ಶಾ ಎಷ್ಟು ಸಮರ್ಥರೆಂಬ ಪ್ರಶ್ನೆ ಮೂಡುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>